ಅನಾರೋಗ್ಯದ ವೃದ್ಧೆಯನ್ನ 3 ಕಿ.ಮೀ. ಹೊತ್ತುಕೊಂಡು ಬಂದ ಮಲೆನಾಡಿಗರು
1 min readಅನಾರೋಗ್ಯದ ವೃದ್ಧೆಯನ್ನು ರಸ್ತೆ ಇಲ್ಲದೆ ತೂಗುಸೇತುವೆ ಮೇಲೆ 3 ಕಿ.ಮೀ. ಹೊತ್ತುಕೊಂಡು ಬಂದು ಆಸ್ಪತ್ರೆಗೆ ಸೇರಿಸಿರುವ ಘಟನೆ ಕಳಸ ತಾಲೂಕಿನ ಸಂಸೆ ಗ್ರಾಪಂ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ
ಲಕ್ಷ್ಮಿ ಎಂಬ 70ರ ವೃದ್ಧೆ ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿದ್ದರು ನೆನ್ನೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ಕರೆದುಕೊಂಡು ಬರಲು ರಸ್ತೆ ಇಲ್ಲದ ಕಾರಣ ಹಳ್ಳಿಯವರು ತೂಗುಸೇತುವೆ ಮೇಲೆ ಎತ್ತಿಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ರಸ್ತೆ ಇಲ್ಲದೆ ಆ ಊರಿನ ಜನ ಭದ್ರಾ ನದಿಗೆ ನಿರ್ಮಿಸಿರುವ ತೂಗು ಸೇತುವೆ ಮೇಲೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ನೆಲ್ಲಿಬೀಡು ಸೇರಿದಂತೆ ಅಲ್ಲಿನ ಸುತ್ತಮುತ್ತಲಿನ ಅಜ್ಜಿಗದ್ದೆ, ಆರೋಳ್ಳಿ, ಕಟ್ಟೆಮನೆ, ಕೋಣೆಮನೆ ಸೇರಿ 10ಕ್ಕೂ ಹೆಚ್ಚು ಹಳ್ಳಿಗೆ ರಸ್ತೆ ಇಲ್ಲದ ಕಾರಣ 10 ಹಳ್ಳಿಯ ಜನರು ಪರದಾಡುವ ಸ್ಥಿತಿ ಉಂಟಾಗಿದ್ದು ಹಳ್ಳಿಯಿಂದ ಮುಖ್ಯ ರಸ್ತೆಗೆ ಬರಲು 3 ಕಿ.ಮೀ. ಸಾಗಬೇಕಾಗುತ್ತದೆ ಹಾಗೂ ಬೇಸಿಗೆಯಲ್ಲಿ ಭದ್ರೆಯ ಒಡಲಲ್ಲೇ ಗಾಡಿಗಳು ಓಡಾಡುತ್ವೆ, ಮಳೆಗಾಲದಲ್ಲಿ ಓಡಾಡಲು ಅಸಾಧ್ಯವಾದ ಪರಿಸ್ಥಿತಿ ಉಂಟಾಗುತ್ತದೆ ಸುಮಾರು 7 ದಶಕಳಗಿಂದ ಮನವಿ ಮಾಡುತ್ತಿದ್ದಾರು ಏನು ಪ್ರಯೋಜನವಾಗಿಲ್ಲ ಇನ್ನಾದರೂ ಶಾಸಕರು ಗಮನಹರಿಸಿ ರಸ್ತೆಯನ್ನು ಮಾಡಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g