ಕಾರು ಬೈಕ್ ಮುಖಾಮುಖಿ ಡಿಕ್ಕಿ – ಅಪಘಾತದ ರಭಸಕ್ಕೆ ಹೊತ್ತಿ ಉರಿದ ಬೈಕ್
1 min readಕಡೂರು : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಕಂಸಾಗರ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಕಡೂರು ಕಡೆ ತೆರಳುತ್ತಿದ್ದ ಬೈಕ್ ಸವಾರರು ತಮ್ಮ ಅಜಾಗರುಕತೆಯಿಂದಾಗಿ ಮೃತ್ಯುಕೂಪಕ್ಕೆ ಬಲಿಯಾಗಿದ್ದಾರೆ. ಹೊಸದುರ್ಗ ಮೂಲಕ 33 ವರ್ಷದ ಲೋಹಿತ್ ಹಾಗೂ 35 ವರ್ಷದ ನಾಗರಾಜ್ ಮೃತ ದುರ್ದೈವಿಗಳಾಗಿದ್ದಾರೆ. ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಹೊಸದುರ್ಗ ಮೂಲದ ಬೈಕ್ ಸವಾರರು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.
ವೇಗದ ತೀವ್ರತೆಗೆ ಬೈಕ್ ಗೆ ಬೆಂಕಿ ತಗುಲಿದ್ದು, ಕಾರು ಪಲ್ಟಿಯಾಗಿ ರಸ್ತೆಯಿಂದ ಪಕ್ಕದ ಗದ್ದೆಗೆ ನುಗ್ಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಕಡೂರು ಪೊಲೀಸರು ಘಟನ ಸ್ಥಳಕ್ಕೆ ದಾವಿಸಿ ಶವಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g