ಕಳೆದ ರಾತ್ರಿ ಮತ್ತೆ ಅಬ್ಬರಿಸಿದ ವರುಣ : ಕಾಂಪೌಂಡ್ ಕುಸಿದು ಬೈಕ್ ಗಳು ಜಖಂ
1 min read
ಕಳೆದ ರಾತ್ರಿ ಮತ್ತೊಮ್ಮೆ ವರುಣ ಅಬ್ಬರಿಸಿದ್ದಾನೆ. ಜಿಲ್ಲೆಯ ಹಲವೆಡೆ ಮಳೆ ಅಬ್ಬರಿಸಿದ್ದು ಕಸ್ಕೆ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದಿದೆ, ನಗರದ ಹೌಸಿಂಗ್ ಬೋರ್ಡ್ ಬಳಿ ಬೈಕ್ ಗಳ ಮೇಲೆ ಕಾಂಪೌಂಡ್ ಕುಸಿದು ಬಿದ್ದಿದೆ ಉದ್ದೇಬೋರನಹಳ್ಳಿ ಗುಡಿಸಲುಗಳ ಒಳಗೆ ಮಳೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ ಕಳೆದ ರಾತ್ರಿ ಅಬ್ಬರಿಸಿರುವ ವರುಣ ಮಲೆನಾಡು ಬಯಲುಸೀಮೆಯಲ್ಲಿ ಎರಡೂ ಕಡೆ ಆರ್ಭಟಿಸಿದ್ದಾನೆ,ಭಾರೀ ಮಳೆಯಿಂದ ಗುಡಿಸಲಿಗೆ ಚರಂಡಿ ನೀರು ನುಗ್ಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ನಡೆದಿದೆ,
ಎರಡು ಗುಡಿಸಲು ಹಾಗು ಗೊಬ್ಬರದ ಗೋಡಾನ್ ಗೆ ಮಳೆ ನೀರು ನುಗ್ಗಿದ್ದು ಚರಂಡಿ ಕಾಮಗಾರಿಯನ್ನ ಅರ್ಧಕ್ಕೆ ನಿಲ್ಲಿಸಿರುವ ಹೆದ್ದಾರಿ ಪ್ರಾಧಿಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಇದೇ ಸ್ಥಳದಲ್ಲಿ ಗೋಡಾನ್ ಗೆ ನೀರು ನುಗ್ಗಿರೋದ್ರಿಂದ ಅಪಾರ ಪ್ರಮಾಣದ ಗೊಬ್ಬರ ಹಾಳಾಗಿದೆ,
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುವಂತಾಗಿದೆ
ಚಿಕ್ಕಮಗಳೂರು ನಗರದಲ್ಲಿ ಬೈಕ್ ಗಳ ಮೇಲೆ ಕಾಂಪೌಂಡ್ ಗೋಡೆ ಕುಸಿದಿದೆ, ಭಾರೀ ಮಳೆ-ಗಾಳಿಗೆ ಬೈಕ್ ಗಳ ಮೇಲೆ ಕಾಂಪೌಂಡ್ ಕುಸಿದು ಎರಡು ಬೈಕ್ ಗಳು ಸಂಪೂರ್ಣ ಜಖಂ ಆಗಿವೆ, ಮಲೆನಾಡು ಭಾಗದಲ್ಲಿ ಕೂಡಾ ಮಳೆ ಅಬ್ಬರಿಸಿದ್ದು ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂ ಆದ ಘಟನೆ
ಚಿಕ್ಕಮಗಳೂರು ತಾಲೂಕಿನ ಕಸ್ಕೆ ಎಂಬ ಗ್ರಾಮದಲ್ಲಿ ಸಂಭವಿಸಿದೆ,
ಮನೆಯವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು
ಮರ ಬಿದ್ದು ಲಕ್ಷಾಂತರ ಮೌಲ್ಯದ ಮನೆ ಗೃಹಪಯೋಗಿ ವಸ್ತುಗಳು ನಾಶವಾಗಿವೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g