ಮನೆಯನ್ನೇ ಗೊಡೌನ್ ಮಾಡಿಕೊಂಡು ಲಕ್ಷಾಂತರ ಮೌಲ್ಯದ ಕ್ರಿಮಿನಾಶಕ ಇಟ್ಟಿದ್ದ ಹೋಂ ಸೀಜ್
1 min readಮನೆಯನ್ನೇ ಗೋಡೌನ್ ಮಾಡಿಕೊಂಡು ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಕೀಟನಾಶಕಗಳನ್ನು ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬರೋಬ್ಬರಿ 5.71 ಲಕ್ಷ ಮೊತ್ತದ ಕೀಟನಾಶಕಗಳ ಜಪ್ತಿ ಮಾಡಲಾಗಿದ್ದು ಕ್ರಿಮಿನಲ್ ಮೊಕದ್ದಮೆ ಹೂಡಲು ಇಲಾಖೆ ನ್ಯಾಯಾಲಯದ ಮೊರೆ ಹೋಗಿದೆ.
ತರೀಕೆರೆ ಪಟ್ಟಣದ ಕುಂಭಾರ ಬೀದಿಯಲ್ಲಿರುವ ತೌಸೀಫ್ ಅಹಮದ್, ನಜೀರ್ ಅಹಮದ್ ಎಂಬುವವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದು ಇದೇ ಮನೆಯಲ್ಲಿ ಕೀಟನಾಶಕ ಮಾರಾಟ ಪರವಾನಗಿ ಇಲ್ಲದೆ ಅಕ್ರಮವಾಗಿ ಕೀಟನಾಶಕ ಗಳನ್ನು ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಇಂದು ಜಂಟಿ ಕೃಷಿ ನಿರ್ದೇಶಕಿ ಸುಜಾತಾ ನೇತೃತ್ವದ ತಂಡ ದಾಳಿ ಮಾಡಿ ಶೋಧ ಕಾರ್ಯ ನಡೆಸಿತು, ಈ ವೇಳೆ 6 ಕಂಪನಿಗಳಿಗೆ ಸೇರಿದ ಒಟ್ಟು 5.71ಲಕ್ಷ ಮೌಲ್ಯದ ಕೀಟನಾಶಕಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದು ಕಂಡು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ಇಟ್ಟಿದ್ದ ಕೀಟನಾಶಕ ಗಳನ್ನು ಜಪ್ತಿ ಮಾಡಿದ್ದು ಕೋರ್ಟ್ ನಲ್ಲಿ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲು ಕೃಷಿ ಇಲಾಖೆ ಮುಂದಾಗಿದೆ. ದಾಳಿಯಲ್ಲಿ ಸಹಾಯಕ ಕೃಷಿ ನಿರ್ದೇಶಕರುಗಳಾದ ತಿಮ್ಮನಗೌಡ ಎಸ್ ಪಾಟೀಲ್, ಎಸ್ ವೆಂಕಟೇಶ ಚವ್ಹಾಣ್, ಕೃಷಿ ಅಧಿಕಾರಿ ಶ್ರೀನಿವಾಸ್ ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g