October 18, 2024

MALNAD TV

HEART OF COFFEE CITY

ಬಿಡುವು ನೀಡಿದ್ದ ಮಳೆ ಬಿರುಗಾಳಿ ಜೊತೆಗೆ ಮತ್ತೆ ಅಬ್ಬರ : ಶಾಲೆಗಳಿಗೆ ಇಂದು ರಜೆ

1 min read

 

 

ಬಿಡುವು ನೀಡಿ ಮತ್ತೆ ಅಬ್ಬರಿಸುತ್ತಿರುವ ಮಳೆ ಜೊತೆ ತೀವ್ರ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಲೆನಾಡಿನ ತಾಲೂಕುಗಳಲ್ಲಿ ಬಿರುಗಾಳಿ ಬೀಸುತ್ತಿದ್ದು ಅಪಾಯ ತರಬಹುದಾದ ಮರಗಳನ್ನು ಕಡಿಯುವ ಕೆಲಸಕ್ಕೆ ಜಿಲ್ಲಾಡಳಿತ ಕೈ ಹಾಕಿದೆ. 

 

ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಹೆಚ್ಚಾಗಿದ್ದರಿಂದ

ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆ ಆಗುತ್ತಿದ್ದು

ಮಳೆ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಜಿಲ್ಲೆಯಾದ್ಯಂತ ಭಾರೀ ಬಿರುಗಾಳಿ ಬೀಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ಒಂದು ದಿನ ಮಾತ್ರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. 

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪರ ತಾಲೂಕಿನ ಅಂಗನವಾಡಿ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!