ಬಿಜಿಎಸ್ ಪಿಯು ಕಾಲೇಜಿನ 73 ಕ್ರೀಡಾಪಟುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
1 min readಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಿ.ಜಿ.ಎಸ್ ಪಿ.ಯು ಕಾಲೇಜು ಚಿಕ್ಕಮಗಳೂರು ವೈಯಕ್ತಿಕ ಚಾಂಪಿಯನ್ ಎನಿಸಿಕೊಂಡಿದೆ. ಕಳೆದ ಆಗಸ್ಟ್ 23,24 ರಂದು ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ 73 ಕ್ರೀಡಾಪಟುಗಳು ಆಯ್ಕೆ ಆಗಿರುತ್ತಾರೆ.ದ್ವಿತೀಯ ಪಿಯು ವಿದ್ಯಾರ್ಥಿ ವರ್ಷಿತ ಡಿ.ಎಂ ವೈಯಕ್ತಿಕ ಚಾಂಪಿಯನ್3000 ಮೀಟರ್ ರನ್ನಿಂಗ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ,
1500 ಮೀಟರ್ ರನ್ನಿಂಗ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, 800 ಮೀಟರ್ ರನ್ನಿಂಗ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ದ್ವಿತೀಯ ಪಿಯು ವಿದ್ಯಾರ್ಥಿ ಪಾಂಡು 5000 ಮೀಟರ್ ರನ್ನಿಂಗ್ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ,
1500 ಮೀಟರ್ ರನ್ನಿಂಗ್ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ, 5000 ಮೀಟರ್ ವಾಕ್ ರೇಸ್ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ,
ದ್ವಿತೀಯ ಪಿ.ಯು ವಿದ್ಯಾರ್ಥಿ ಲಿಖಿತ್ ಬಾಲಕರ ಈಜು ಸ್ಪರ್ಧೆಯಲ್ಲಿ 1500 ಮೀಟರ್ ಫ್ರೀ ಸ್ಟೈಲ್ ಪ್ರಥಮ ಸ್ಥಾನ, 400 ಮೀಟರ್ ಫ್ರೀ ಸ್ಟೈಲ್ ದ್ವಿತೀಯ ಸ್ಥಾನ, 50 ಮೀಟರ್ ಬ್ಯಾಕ್ ಸ್ಟ್ರೋಕ್ ದ್ವಿತೀಯ ಸ್ಥಾನ ಪಡೆದಿರುತ್ತಾನೆ.
ಪ್ರಥಮ ಪಿಯು ವಿದ್ಯಾರ್ಥಿ ತನ್ವಿತ್ ಚೆಸ್ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾನೆ.
ದ್ವಿತೀಯ ಪಿಯು ವಿದ್ಯಾರ್ಥಿ ಮೇಘನ ಬಾಲಕಿಯರ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಸೂರ್ಯಪ್ರಕಾಶ್, ಶಿವಕುಮಾರ್, ಸುನಿಲ್ ಮೌಲ್ಯ ಸಿಲಂಬಂ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಅಮೃತೇಶ್, ಪಂಡಳೆಶ್ ಟೆಕ್ವಾಂಡು ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ದ್ವಿತೀಯ ಪಿಯು ವಿದ್ಯಾರ್ಥಿ ಪೂಜಾ ಎಸ್ ಬಿ ಟ್ರಿಪಲ್ ಜಂಪ್ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ದ್ವಿತೀಯ ಪಿಯು ವಿದ್ಯಾರ್ಥಿ ಸುನಿಲ್ ಮೌಲ್ಯ 5000 ಮೀಟರ್ ರನ್ನಿಂಗ್ ಬಾಯ್ಸ್ ತೃತೀಯ ಸ್ಥಾನ ಪಡೆದಿರುತ್ತಾನೆ.
ದ್ವಿತೀಯ ಪಿಯು ವಿದ್ಯಾರ್ಥಿ ಭರತ್ ಗುಂಡು ಎಸೆತ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.
ಋತ್ವಿಕ್ ಮತ್ತು ತಂಡ ಹಾಕಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ತನು ಮತ್ತು ತಂಡ ಹಾಕಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ
ಕಿಶೋರ್ ಮತ್ತು ತಂಡ ಫುಟ್ಬಾಲ್ ಬಾಯ್ಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ
ಪ್ರಮುಖ್ ಮತ್ತು ತಂಡ ಟೇಬಲ್ ಟೆನಿಸ್ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಯಶಸ್ ಮತ್ತು ತಂಡ ಟೆನ್ನಿಸ್ ವಾಲಿಬಾಲ್ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ಕ್ರೀಡಾಕೂಟದಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದ ವಿಜೇತರಿಗೆ ಗುಣನಾಥ ಸ್ವಾಮೀಜಿ ಪ್ರಾಚಾರ್ಯ ಜೆ ಜಿ ಸುರೇಂದ್ರ ಕ್ರೀಡಾ ಮುಖ್ಯಸ್ಥ ಹಾಗೂ ಉಪನ್ಯಾಸಕ ನಿರಂಜನ್ ಡಿ.ಪಿ ಮತ್ತು ಉಪನ್ಯಾಸ ವೃಂದದವರು ಅಭಿನಂದಿಸಿರುತ್ತಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g