ಆಫ್ ರೋಡ್ ರ್ಯಾಲಿ ವಿರುದ್ಧ ತನಿಖೆಗೆ ಆದೇಶ ಕೊಟ್ಟ ಅರಣ್ಯ ಸಚಿವ ಈಶ್ವರ ಖಂಡ್ರೆ
1 min readಮೂಡಿಗೆರೆ ಎತ್ತಿನಭುಜ ಸುತ್ತಮುತ್ತ ನಡೆದ ಆಫ್ ರೋಡ್ ಕಾರ್ ರ್ಯಾಲಿ ವಿರುದ್ಧ ಖುದ್ದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರೇ ಕೆಂಡಾಮಂಡಲರಾಗಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲು ಇರೋದು ಮೋಜುಮಸ್ತಿಗಲ್ಲ ಎಂದಿರುವ ಖಂಡ್ರೆ ಪ್ರಕರಣವನ್ನು ತನಿಖೆಗೆ ಒಳಪಡಿಸಿ ಆದೇಶ ಹೊರಡಿಸಿದ್ದಾರೆ
ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ ಎಂದು ಮೊನ್ನೆ ನಡೆದ ಕಾರ್ ರ್ಯಾಲಿ ವಿರುದ್ಧ ಅರಣ್ಯ ಇಲಾಖೆ ಸಚಿವರೇ ಕಿಡಿ ಕಾರಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಅರಣ್ಯ ಸಚಿವರೇ ಇದೀಗ ತನಿಖೆಗೆ ಆದೇಶ ನೀಡಿದ್ದಾರೆ.
ಮೂಡಿಗೆರೆಯಲ್ಲಿ ನಡೆದ ಫೋರ್ ವೀಲ್ ರ್ಯಾಲಿ ವಿರುದ್ಧ ತನಿಖೆಗೆ ಆದೇಶ ಹೊರಬಿದ್ದಿದೆ. ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಭೈರಾಪುರ-ಹೊಸಕೆರೆಯಲ್ಲಿ ಈ ರ್ಯಾಲಿ ನಡೆದಿತ್ತು. ಆನೆ ಕಾರಿಡಾರ್ ವ್ಯಾಪ್ತಿಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ರ್ಯಾಲಿ ನಡೆದ ಆರೋಪ ಕೇಳಿ ಬಂದಿತ್ತು. ಸುಮಾರು 80ಕ್ಕೂ ಹೆಚ್ಚು ಜೀಪ್ ಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು. ಇದರ ಸಂಪೂರ್ಣ ಪರಿಶೀಲನೆ ನಡೆಸಿ ಸಿ.ಸಿ. ಎಫ್ ದರ್ಜೆ ಅಧಿಕಾರಿ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಕೊಟ್ಟಿದ್ದಾರೆ.
ಅರಣ್ಯ, ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಹಾ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಅರಣ್ಯ ಸಂಬಂಧಿಸಿದ ಆದೇಶಗಳು ಹೆಚ್ಚು ಸದ್ದು ಮಾಡುತ್ತಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g