ಗಣಪತಿ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ ಇಬ್ಬರು ಯುವಕರು ಸಾವು :
1 min read
ದೇಶದೆಲ್ಲೆಡೆ ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸುತ್ತಿದ್ದು ಯುವ ಸಮೂಹ ಗಲ್ಲಿ ಗಲ್ಲಿಗಳಲ್ಲಿ ವಕ್ರ ತುಂಡನ ಪ್ರತಿಷ್ಟಾಪಿಸಲು ಹವಣಿಸುತ್ತಿರುವ ವೇಳೆ ಗಣೇಶನ ತರಲು ತೆರಳಿದ್ದ ಯುವಕರ ಪಾಲಿಗೆ ಕರಾಳ ದಿನವಾಗಿ ಪರಿಣಮಿಸಿದೆ.
ಟಾಟಾ ಏಸ್ ಆಟೋ ವಾಹನದಲ್ಲಿ ಗಣಪತಿ ತರಲು ತೆರಳುತ್ತಿದ್ದ ವೇಳೆ ಆಟೋ ಪಲ್ಟಿ ಆಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಗಣಪತಿ ತರಲು ಹೋಗುತ್ತಿದ್ದ 9 ಜನ ಯುವಕರಿಂದ ಟಾಟಾ ಏಸ್ ಅಪಘಾತಕ್ಕೊಳಗಾಗಿದೆ. ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ದುರ್ಘಟನೆ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ ಯುವಕರಾಗಿದ್ದಾರೆ. ಆಕ್ಸಿಡೆಂಟ್ ನಲ್ಲಿ ಮತ್ತೆ ಇಬ್ಬರು ಯುವಕರ ತಲೆಗೆ ಗಂಭೀರ ಗಾಯಗಳಾಗಿ ಅವರಿಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ರವಾನಿಸಲಾಗಿದೆ. ಅಲ್ಲದೇ ವಾಹನದಲ್ಲಿದ್ದ ಮೂವರು ಯುವಕರಿಗೆ ಹೆಚ್ಚಿನ ಗಾಯವಾಗಿದ್ದು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಗಣಪತಿ ತರಲು ಟಾಟಾ ಏಸ್ ನಲ್ಲಿ ತರೀಕೆರೆಗೆ ಯುವಕರು ಹೋಗುತ್ತಿದ್ದರು ಈ ವೇಳೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ ಆಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ . ಗಣೇಶನ ಹಬ್ಬದ ಖುಷಿಯಲ್ಲಿದ್ದ ಊರಿಗೆ ಇದೀಗ ಸೂತಕದ ಛಾಯೆ ಆವರಿಸಿದೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g