ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ
1 min readಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ್ ಎಂಬ ವ್ಯಕ್ತಿ ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು 112 ಗೆ ಫೋನ್ ಮಾಡಿ ಸರ್ ಗಲಾಟೆ ಬೇಗ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ್ದಾನೆ ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಎಂದು ಮಾಡಿದ್ದಾನೆ ಮೂಡಿಗೆರೆ 112 ಪೊಲೀಸರಿಗೆ ಗಾಡಿ ಯಾವು ಇಲ್ಲ ಸರ್ ಮಳೆ ಬೇರೆ ಬರ್ತ್ತಿದೆ ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡಿ ಎಂದು ರಿಕ್ವೆಸ್ಟ್ ಮಾಡಿದ್ದಾನೆ ಆತನನ್ನು ನೋಡಿದ ಪೊಲೀಸರಿಗೆ ಒಂದು ಕ್ಷಣ ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ ನಂತರ ಮೂಡಿಗೆರೆ 112 ಪೊಲೀಸರು ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ ಗೆ ಬುದ್ಧಿವಾದ ಹೇಳಿ ಕೊನೆಗೆ ಪೊಲೀಸರೇ ಲಾರಿ ಅಡ್ಡ ಹಾಕಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g