October 18, 2024

MALNAD TV

HEART OF COFFEE CITY

ವೃದ್ದಾಪ್ಯದಲ್ಲಿ ಪೋಷಕರನ್ನು ನೋಡಿ ಕೊಳ್ಳುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯ : ಕೋಟ ಶ್ರೀನಿವಾಸ ಪೂಜಾರಿ

1 min read

ವೃದ್ದಾಪ್ಯದಲ್ಲಿ ಪೋಷಕರನ್ನು ನೋಡಿ ಕೊಳ್ಳುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯ ಹಾಗೂ ಪೋಷಕರನ್ನು ನೋಡಿ ಕೊಳ್ಳುವುದು ಕುಟುಂಬ ಎಲ್ಲಾ ಸದಸ್ಯರ ನೈತಿಕ ಜವಾಬ್ದಾರಿ, ಮಾತ್ರವಲ್ಲ ಅದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸೇವಾ ಸಂಘ ಸಂಸ್ಥೆಗಳು, ಹಾಗೂ ನಗರಸಭೆ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ಕಲಾ ಮಂದಿರದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ರಾಷ್ಟ್ರೀಯ ವಯೋ ಶ್ರೀ ಯೋಜನೆಯಡಿ ಹಿರಿಯ ನಾಗರೀಕರಿಗೆ ಸಾಧನ ಸಲಕರಣೆ ವಿತರಣ ಕಾರ್ಯಕ್ರಮವನ್ನು ನಡೆಸಲಾಯಿತು 

 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಹಿರಿಯ ನಾಗರೀಕರ ರಕ್ಷಣೆ ಕಾಯ್ದೆಯ ಅರಿವಿನ ಕೊರತೆಯಿಂದಾಗಿ ವೃದ್ದಾಪ್ಯದಲ್ಲಿ ಹಿರಿಯರನ್ನು ಅವರ ಮಕ್ಕಳು ಕಡೆಗಣಿಸುತ್ತಿರುವುದನ್ನು ಕಾಣುತ್ತೇವೆ. ಹಿರಿಯ ನಾಗರೀಕ ಹಕ್ಕುಗಳನ್ನು ತಿಳಿದುಕೊಳ್ಳುವುದು. ಜಾಗೃತಿ ಮೂಡಿಸುವುದು ಮತ್ತು ಸಂರಕ್ಷಿಸುವುದು ನಮ್ಮ ಕರ್ತವ್ಯ.ನಮ್ಮಿಂದ ಹಿರಿಯ ನಾಗರೀಕರು ನಿರೀಕ್ಷಿಸುವುದು ಕೇವಲ ಪ್ರೀತಿ, ಗೌರವ ಮತ್ತು ಅವರ ಹಕ್ಕುಗಳನ್ನು ಮಾತ್ರ, ಅದನ್ನು ನೀಡಲು ನಮ್ಮ ಸಮಾಜದಿಂದ ಸಾಧ್ಯ. ಹಾಗಾಗಿ ಎಲ್ಲರೂ ಉತ್ತಮ ನಾಗರೀಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಶಾಸಕ ಹೆಚ್. ಡಿ ತಮ್ಮಯ್ಯ ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಬೋಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್,ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಉಪಸ್ಥಿತರಿದ್ದರು 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!