ನಾಯಿ ತಪ್ಪಿಸಲು ಹೋಗಿ ಗದ್ದೆಗಿಳಿದ ಬೈಕ್, ಹೆಲ್ಮೆಟ್ ಹಾಕಿದ್ದರಿಂದ ತಪ್ಪಿದ ಅನಾಹುತ
1 min read
ಬೈಕಿಗೆ ಬೀದಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ನಾಯಿ ತಪ್ಪಿಸಲು ಹೋಗಿ ರಸ್ತೆ ಮಧ್ಯೆ ಬಿದ್ದು ಉಜ್ಜಿಕೊಂಡು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ. ಬಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆ ಮಧ್ಯೆ ಉಜ್ಜಿಕೊಂಡ ಹೋದ ಬೈಕ್ ಸವಾರ ರಸ್ತೆಯ ಬದಿಯ 10 ಅಡಿ ಆಳಕ್ಕೆ ಉರುಳಿ ಬಿದ್ದಿದ್ದಾನೆ. ರಸ್ತೆ ಬದಿಯ ಗದ್ದೆಗೆ ತಂತಿ ಬೇಲಿ ಇದ್ದ ಪರಿಣಾಮ ಬೈಕ್ ಸವಾರ ತಂತಿ ಬೇಲಿಗೆ ಸಿಲುಕಿಕೊಂಡಿದ್ದಾನೆ. ಇಲ್ಲವಾದರೆ ಬೈಲ್ ಸವಾರನಿಗೆ ದೊಡ್ಡ ಮಟ್ಟದ ಅನಾಹುತವಾಗುತ್ತಿತ್ತು. ಬೈಕ್ ಸವಾರ ತಲೆಗೆ ಹೆಲ್ಮೆಟ್ ಹಾಕಿದ್ದರಿಂದಲೂ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಬೈಕ್ ಸವಾರ ಲಕ್ಷ್ಮಣ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ. ಮೂಡಿಗೆರೆ ತಾಲೂಕಿನಲ್ಲಿ ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೂ ನಿತ್ಯ ಹತ್ತಾರು ಅಪಘಾತಗಳು ಸಂಭವಿಸುತ್ತಿವೆ. ಕಾರಣ ಒಂದು ಬಿಡಾಡಿ ದನಗಳು. ಮತ್ತೊಂದು ಬೀದಿ ನಾಯಿಗಳು. ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆ ಹಾರದವರೆಗಿನ 22 ಕಿ.ಮೀ. ಮಾರ್ಗದಲ್ಲಿ ತಿಂಗಳಿಗೆ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಕಾರಣ ನಾಯಿ ಹಾಗೂ ಹಸುಗಳು. ಹಾಗಾಗಿ, ಬಿಡಾಡಿ ದನಗಳ ಬಗ್ಗೆ ಗ್ರಾಮ ಪಂಚಾಯಿತಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡುತ್ತಲೇ ಇದ್ದಾರೆ. ಆದರೆ, ಪಂಚಾಯಿತಿ ಹಾಗೂ ತಾಲೂಕು ಆಡಳಿತ ಯಾವುದೇ ಕ್ರಮ ಕೈಗೊಳ್ಳದ ಕಾರಣ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ದನ ಹಾಗೂ ನಾಯಿಗಳಿಂದ ನಿತ್ಯ ಅಪಘಾತಗಳು ಸಂಭವಿಸುತ್ತಲೇ ಇವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g