ಟಿಟಿ ಡ್ರೈವರ್ ಗೆ ಹೃದಯಾಘಾತ, ಬೆಂಗಳೂರು ಮೂಲದ ಚಾಲಕ ಕಾಫಿನಾಡಲ್ಲಿ ಸಾವು
1 min read
ಪ್ರವಾಸಕ್ಕೆ ಬಂದಿದ್ದ ಟಿಟಿ ವಾಹನದ ಚಾಲಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಮೃತನನ್ನ 25 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ. ಮೃತ ಅವಿನಾಶ್ ಮೂಲತಃ ಬೆಂಗಳೂರಿನ ಸೋಮನಹಳ್ಳಿ ಮೂಲದವನು. ಇಂದು ತನ್ನ ಟಿಟಿ ವಾಹನದಲ್ಲಿ ಪ್ರವಾಸಿಗರನ್ನ ಕರೆದುಕೊಂಡು ಚಿಕ್ಕಮಗಳೂರಿನ ವಿವಿಧ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಬಂದಿದ್ದನು. ಪ್ರವಾಸಿಗಳನ್ನು ಹೋಂಸ್ಟೇ ಬಳಿ ಬಿಡುತ್ತಿದ್ದಂತೆ ಟಿಟಿ ವಾಹನದ ಚಾಲಕ ಅವಿನಾಶ್ ಗೆ ಎದೆ ನೋವು ಕಾಣಿಸಿಕೊಂಡಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರು ಚಿಕಿತ್ಸೆ ಫಲಕಾರಿಯಾಗದೆ ಅವಿನಾಶ್ ಸಾವನ್ನಪ್ಪಿದ್ದಾನೆ. ಮೃತ ಅವಿನಾಶ್ ಗೆ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು 2 ವರ್ಷದ ಒಂದು ಒಂದು ಮಗುವಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g