ಕಾಫಿನಾಡಲ್ಲಿ ಸುರಿಯುತ್ತಿರೋ ನಿರಂತರ ಮಳೆಯಿಂದ ಹೆಚ್ಚಿನ ಆವಾಂತರ
1 min read
ಚಿಕ್ಕಮಗಳೂರು ತಾಲೂಕಿನ ಭಕ್ತರ ಹಳ್ಳಿಯಲ್ಲಿ ಗೌರಮ್ಮ ಎಂಬುವವರಿಗೆ ಸೇರಿದ ಮನೆ ಮೇಲ್ಛಾವಣಿ ಹಾಗೂ ಗೋಡೆ ಕುಸಿತವಾಗಿದೆ.ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕುಸಿತ ಕಂಡಿದ್ರಿಂದ ಯಾವುದೇ ಆನಾಹುತವಾಗಿಲ್ಲ. ಮನೆಯ ವಸ್ತುಗಳು ಹಾನಿಯಾಗಿದೆ.
ಮನೆ ಕುಸಿತವಾಗಿದ್ರಿಂದ ಮನೆಯಲ್ಲಿ ವಾಸ ಇರಲು ಸಾಧ್ಯವಾಗದೇ ಬೇರೆಡೆ ಗುಡಿಸಲು ನಿರ್ಮಿಸಿ ಕುಟುಂಬ ವಾಸ್ತವ್ಯ ಹೂಡುವಂತಾಗಿದೆ.ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆ ಪರಿಹರಿಸುವಂತೆ ಗೌರಮ್ಮ ಹಾಗೂ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಈ ನಡುವೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ
ತೀವ್ರಗೊಂಡಿದೆ. ಕಳಸ, ಕುದುರೆಮುಖ ಹೊರನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಳಗ್ಗೆಯಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯ ಕಾರಣ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ-ಅಡಿಕೆ-ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಮಲೆನಾಡ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದು, ಗುಡ್ಡಗಾಡು ತಪ್ಪಲಿನ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆ ಕಳಸ ಮೂಡಿಗೆರೆ ತಾಲೂಕುಗಳಲ್ಲಿ ಭೂ ಕುಸಿತದ ಭೀತಿಯು ಹೆಚ್ಚಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g