October 22, 2024

MALNAD TV

HEART OF COFFEE CITY

ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರ, ಬೆಚ್ಚಿ ಬಿದ್ದ ಮಲೆನಾಡು

1 min read

 

ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಕಂಗಾಲಾಗಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಕೆಗೆ ಮೂರ್ತಿ ರೂಪ ಕೊಡುವ ಭಯಂಕರ ವಾಮಾಚಾರ ಮಾಡಿದ್ದಾರೆ. ಮೂಡಗೆರೆ ತಾಲೂಕಿನ ಹೆಡದಾಳು ಗ್ರಾಮದ‌ ಚೇತನ್ ಎಂಬುವರ ಮನೆ ಹಾಗೂ ಚೇತನ್ ಮನೆಯ ಮೂರು ದಾರಿ ಕೂಡಿರುವ ಕಡೆ ವಾಮಾಚಾರ ಮಾಡಿದ್ದಾರೆ. ಹಸಿರು ಬಳೆಯ ಮೇಲೆ ಮಣ್ಣಿನ ಮಡಕೆ ಕೂರಿಸಿ, ಆ ಮಡಕೆಗೆ ಗೊಂಬೆ ರೂಪ ನೀಡಿ ಕಾಳಿಯ ಮುಖದಂತೆ ಮಾಡಿ ಮಾಟ ಮಾಡಿದ್ದಾರೆ. ಬೆಳಗಿನ ಜಾವ 4 ರಿಂದ 5 ಗಂಟೆ ಸುಮಾರಿಗೆ ಐವರು ಕಿಡಿಗೇಡಿಗಳ ಈ ದುಷ್ಕೃತ್ಯವನ್ನ ಸ್ಥಳೀಯರು ಶಬ್ಧ ಬರುತ್ತಿದ್ದಾಗ ತಮ್ಮ ಮನೆಯ ಒಳ ಭಾಗದಿಂದ ನೋಡಿದ್ದಾರೆ. ಆದರೆ, ಹೋಗಲು ಭಯಗೊಂಡು ಮನೆಯಲ್ಲೇ ಇದ್ದಾರೆ. ಬೆಳಗ್ಗೆ ನೋಡಿದಾಗ ಮಾಟ ಮಾಡಿರುವುದು ಬೆಳಕಿಗೆ ಬಂದಿದೆ. ಮಾಟದ ಜಾಗದಲ್ಲಿ ಅರಿಶಿನ-ಕುಂಕುಮ, ಹಣ್ಣು-ಕಾಯಿ ಸೇರಿ ವಿವಿಧ ವಸ್ತುಗಳು ಪತ್ತೆಯಾಗಿವೆ. ಸಾಮಾನ್ಯವಾಗಿ ಮಾಟ ಮಾಡುವವರು ಪ್ರಾಣಿ ಬಲಿ ನೀಡಿ ಮಾಟ ಮಾಡುತ್ತಾರೆ. ಆದರೆ, ಹಸಿರು ಬಳೆ ಮೇಲೆ ಮಟಕೆಗೆ ಮಣ್ಣಿನ ರೂಪದಲ್ಲಿ ಕಾಳಿಯಂತೆ ಮಾಡಿ ವಾಮಾಚಾರ ಮಾಡಿರುವುದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ. ಗ್ರಾಮಸ್ಥರು ಈ ಕುರಿತು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!