ಆಹಾರಕ್ಕಾಗಿ ಪರದಾಡ್ತಿದ್ದ ವಾನರ ಸೈನ್ಯಕ್ಕೆ ಬಾಳೆಹಣ್ಣು ನೀಡಿದ ಬಿ.ಜೆ.ಪಿ. ರಾಜ್ಯಾಧ್ಯಕ್ಷ
1 min readಮೂಡಿಗೆರೆ : ವಾಹನ ಸಂಚಾರವಿಲ್ಲದೆ ಆಹಾರಕ್ಕಾಗಿ ಪರದಾಡ್ತಿದ್ದ ವಾನರ ಸೈನ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಾಳೆಹಣ್ಣನ್ನ ನೀಡಿದ್ದಾರೆ. ನಳೀನ್ ಕುಮಾರ್ ಕಟೀಲ್ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟ್ ಮೂಲಕ ಮಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ, ಭಜರಂಗದಳದ ಕಾರ್ಯಕರ್ತರು ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಆಹಾರ ನೀಡುತ್ತಿದ್ದರು. ಇದನ್ನ ಗಮನಿಸಿದ ನಳೀನ್ ಕುಮಾರ್ ಕಟೀಲ್ ಗಾಡಿಯಿಂದ ಕೆಳಗೆ ಇಳಿದು ಅರ್ಧ ಗಂಟೆಗೂ ಹೆಚ್ಚು ಹೊತ್ತು ಕಾರ್ಯಕರ್ತರು ಹಾಗೂ ಮಂಗಗಳ ಜೊತೆ ಸಮಯ ಕಳೆದಿದ್ದಾರೆ. ಈ ವೇಳೆ, ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚರವಿಲ್ಲದೆ ಆಹಾರಕ್ಕಾಗಿ ಪರದಾಡ್ತಿದ್ದ ಮಂಗಗಳಿಗೆ ಭಜರಂಗದಳದ ಕಾರ್ಯಕರ್ತರು ನೂರು ಕೆ.ಜಿ. ಬಾಳೆಹಣ್ಣನ್ನ ತಂದು ನೀಡುತ್ತಿದ್ದರು. ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಮಂಗಗಳಿಗೆ ಬಾಳೆಹಣ್ಣನ್ನ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g