ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ
1 min readಚಿಕ್ಕಮಗಳೂರು .ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನ ಚಿಕ್ಕಮಗಳೂರಿನ ಸಂಚಾರಿ ಅರಣ್ಯ ವಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ ಸಮೀಪ ಇಬ್ಬರು ಆರೋಪಿಗಳು ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದರು, ಈ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಕಲ್ಲದೊಡ್ಡಿ ನಿವಾಸಿ ಶೇಖರ್ ಬಂಧಿತ ಆರೋಪಿ, ಆರೋಪಿ ಜೊತೆ 2 ಹುಲಿ ಉಗುರುಗಳನ್ನ ವಶಪಡಿಸಿ ಕೊಂಡಿದ್ದಾರೆ.
ಮತ್ತೊಬ್ಬ ಆರೋಪಿ ಹುಕ್ಕುಂದ ಗ್ರಾಮದ ಸುಂದರ್ ಪರಾರಿಯಾಗಿದ್ದು ಸುಂದರ್ ಗಾಗಿ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಕಾಫಿತೋಟದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದಿದ್ದ ಆರೋಪಿಗಳು ಹುಲಿ ಉಗುರಿಗೆ ಬೇಡಿಕೆ ಹೆಚ್ಚಿರೋ ಹಿನ್ನೆಲೆ ಉಗುರು ಮಾರಾಟ ಮಾಡಲು ಸಂಚು ರೂಪಿಸಿದ್ರು, ಈ ವೇಳೆ ಅರಣ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g