ಇರಾನ್ ಯುದ್ಧದ ಸುಳಿಯಲ್ಲಿ ಕೊಪ್ಪದ ಯುವಕ: ಮಗನ ಪತ್ತೆಗಾಗಿ ಪೋಷಕರ ಕಣ್ಣೀರು

Spread the love

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಯುದ್ಧದ ಮಧ್ಯೆ ಸಿಲುಕಿಕೊಂಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಮರ್ಚಂಟ್ ನೇವಿಯಲ್ಲಿ ಉದ್ಯೋಗಿಯಾಗಿದ್ದ ಇವರು ಸುಮಾರು ಐದು ತಿಂಗಳ ಹಿಂದಷ್ಟೇ ಕೆಲಸದ ನಿಮಿತ್ತ ಇರಾನ್‌ಗೆ ತೆರಳಿದ್ದರು. ಆದರೆ ಪ್ರಸ್ತುತ ಅಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಕಳೆದ ಕೆಲವು ದಿನಗಳಿಂದ ನಿಶ್ಚಿತ್ ತಮ್ಮ ಕುಟುಂಬದವರ ಸಂಪರ್ಕಕ್ಕೆ ಸಿಗುತ್ತಿಲ್ಲ.
​ತಮ್ಮ ಮಗನ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಪೋಷಕರು ಅತೀವ ಆತಂಕಕ್ಕೊಳಗಾಗಿದ್ದು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಮಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕು ಎಂದು ಅಳಲು ತೋಡಿಕೊಂಡಿದ್ದಾರೆ. ಇತ್ತ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಈ ಬಗ್ಗೆ ಅಧಿಕೃತ ಮಾಹಿತಿ ದೊರೆಯದಿದ್ದರೂ, ಮಗನಿಗಾಗಿ ಪೋಷಕರು ನಡೆಸುತ್ತಿರುವ ಹೋರಾಟ ಎಲ್ಲರ ಗಮನ ಸೆಳೆಯುತ್ತಿದೆ. ಯುದ್ಧ ಭೂಮಿಯಲ್ಲಿ ಸಿಲುಕಿರುವ ಕಾಫಿನಾಡಿನ ಈ ಯುವಕನ ಸುರಕ್ಷತೆಗಾಗಿ ಇಡೀ ಗ್ರಾಮವೇ ಪ್ರಾರ್ಥಿಸುತ್ತಿದೆ.

Leave a Reply

Your email address will not be published. Required fields are marked *