ಶೃಂಗೇರಿ: ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಭೀಕರತೆ ಮತ್ತು ವಿಮಾನ ಹಾರಾಟದ ವ್ಯತ್ಯಯದಿಂದಾಗಿ, ಶೃಂಗೇರಿ ಮೂಲದ ಗರ್ಭಿಣಿ ಮಹಿಳೆ ಮತ್ತು ಆಯುಷಿ ಎಂಬ ಪುಟ್ಟ ಮಗು ಕುವೈತ್ನಲ್ಲಿ ಸಿಲುಕಿದ್ದಾರೆ. ಏಳು ತಿಂಗಳ ಗರ್ಭಿಣಿಯಾದ ಅಪೂರ್ವ ಅವರು ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾರ್ಚ್ 8ರಂದು ಅವರು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿದ್ದರೂ, ಯುದ್ಧದ ಉದ್ವಿಗ್ನತೆಯಿಂದಾಗಿ ಪ್ರಯಾಣ ರದ್ದಾಗಿರುವುದು ಅವರ ಕುಟುಂಬದಲ್ಲಿ ಆತಂಕ ಮೂಡಿಸಿದೆ.
ಈ ಹಿನ್ನೆಲೆಯಲ್ಲಿ ಶೃಂಗೇರಿಯ ಅವರ ಪೋಷಕರು ತಮ್ಮ ಮಗಳು ಮತ್ತು ಮೊಮ್ಮಗಳ ರಕ್ಷಣೆಗಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೊರೆ ಹೋಗಿದ್ದಾರೆ. ಜೆಡಿಎಸ್ ವಕ್ತಾರ ಸುಧಾಕರ್ ಶೆಟ್ಟಿ ಅವರ ಮೂಲಕ ಕುಮಾರಸ್ವಾಮಿ ಅವರಿಗೆ ಪತ್ರ ಬರೆಯಲಾಗಿದ್ದು, ಕುವೈತ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಅವರನ್ನು ತುರ್ತಾಗಿ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ. ಗರ್ಭಿಣಿಯಾಗಿರುವ ಅಪೂರ್ವ ಅವರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯಪ್ರವೇಶಿಸಿ ಅವರಿಗೆ ಸುರಕ್ಷಿತ ಹಾದಿ ಮಾಡಿಕೊಡಬೇಕೆಂದು ಕುಟುಂಬಸ್ಥರು ಭರವಸೆಯಿಂದ ಕಾಯುತ್ತಿದ್ದಾರೆ.











Leave a Reply