ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ – ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಭರವಸೆ 

Spread the love

 

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದೆ ಎಂಬ ಸಾರ್ವಜನಿಕರ ಆತಂಕಕ್ಕೆ ತೆರೆ ಎಳೆದಿರುವ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು, ಜಿಲ್ಲೆಯಲ್ಲಿ ಯಾವುದೇ ರೀತಿಯ ಸಿಲಿಂಡರ್ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಾಣಿಜ್ಯ ಹಾಗೂ ಗೃಹ ಬಳಕೆ ಸಿಲಿಂಡರ್ ಗಳು ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇವೆ.ಗೃಹ ಬಳಕೆ ಸಿಲಿಂಡರ್: ಇನ್ನೂ ಒಂದು ತಿಂಗಳಿಗೆ ಆಗುವಷ್ಟು ಗೃಹ ಬಳಕೆ ಸಿಲಿಂಡರ್ ಗಳು ಲಭ್ಯವಿದ್ದು, ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ.ವಾಣಿಜ್ಯ ಬಳಕೆ: ಪ್ರಸ್ತುತ ಜಿಲ್ಲೆಯಲ್ಲಿ 1442 ವಾಣಿಜ್ಯ ಬಳಕೆಯ ಸಿಲಿಂಡರ್ ಗಳು ಲಭ್ಯವಿದ್ದು, ಒಂದು ವಾರ ಸರಿದೂಗಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.ಗ್ರಾಹಕರ ಮಾಹಿತಿ: ಜಿಲ್ಲೆಯಲ್ಲಿ ಒಟ್ಟು 12,716 ಗೃಹ ಬಳಕೆ ಸಿಲಿಂಡರ್ ಗ್ರಾಹಕರು ಇದ್ದು, ಪ್ರತಿದಿನ ಸರಾಸರಿ 9 ಸಾವಿರ ಸಿಲಿಂಡರ್ ಗಳು ಬುಕಿಂಗ್ ಆಗುತ್ತಿವೆ. ಸಿಲಿಂಡರ್‌ಗಳ ಕೊರತೆಯ ನೆಪವನ್ನಿಟ್ಟುಕೊಂಡು ಯಾರಾದರೂ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ಅಥವಾ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದರು. 

ಗ್ರಾಹಕರು ಗಾಬರಿಯಿಂದ ಮುಗಿಬಿದ್ದು ಬುಕಿಂಗ್ ಮಾಡುವ ಅಗತ್ಯವಿಲ್ಲ. ಸರಬರಾಜು ವ್ಯವಸ್ಥೆ ಸುಗಮವಾಗಿದ್ದು, ನಿಗದಿತ ಅವಧಿಯಲ್ಲಿ ಸಿಲಿಂಡರ್ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಈ ಮೂಲಕ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *