ಬೆಳೆ ರಕ್ಷಣೆಗೆ ಒಂಟಿ ಸಲಗ ಬೆನ್ನಟ್ಟಿದ ರೈತರು 

Spread the love

 

 

ತರೀಕೆರೆ: ​ಕಾಫಿನಾಡು ಚಿಕ್ಕಮಗಳೂರಿನಲ್ಲಿ ಆನೆ ಮತ್ತು ಮಾನವ ಸಂಘರ್ಷದ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತರೀಕೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ರೈತರು ತಮ್ಮ ಬೆಳೆ ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಪ್ರಾಣವನ್ನೇ ಪಣಕ್ಕಿಟ್ಟು ಕಾಡಾನೆಗಳನ್ನು ಎದುರಿಸುವಂತಾಗಿದೆ. ಕೃಷಿ ಜಮೀನಿಗೆ ನುಗ್ಗಿದ್ದ ಒಂಟಿ ಸಲಗವನ್ನು ಗ್ರಾಮದ ರೈತರು ಬೆದರಿಸಿ ಕಾಡಿಗೆ ಅಟ್ಟುವ ಸಾಹಸ ಮೆರೆದಿದ್ದಾರೆ. ರೈತರು ಒಂಟಿ ಸಲಗವನ್ನು ಹಿಮ್ಮೆಟ್ಟಿಸುತ್ತಿರುವ ಈ ರೋಚಕ ದೃಶ್ಯಗಳು ಸದ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

​ನಿರಂತರವಾಗಿ ದಾಳಿ ನಡೆಸುತ್ತಿರುವ ಗಜಪಡೆಯ ಉಪಟಳದಿಂದ ಇಲ್ಲಿನ ಕೃಷಿಕರು ಕಂಗೆಟ್ಟಿದ್ದು, ಪ್ರತಿ ರಾತ್ರಿಯೂ ಆತಂಕದಲ್ಲೇ ಕಳೆಯುವಂತಾಗಿದೆ. ಕಾಡಾನೆಗಳ ಈ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂಬ ಒತ್ತಾಯ ಈಗ ಜಿಲ್ಲೆಯಾದ್ಯಂತ ಕೇಳಿಬರುತ್ತಿದೆ. ಅರಣ್ಯ ಇಲಾಖೆಯು ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ರೈತರ ಜಮೀನುಗಳಿಗೆ ಆನೆಗಳು ನುಗ್ಗದಂತೆ ಶಾಶ್ವತ ಸೋಲಾರ್ ಬೇಲಿ ನಿರ್ಮಿಸಬೇಕು ಎಂಬ ಕೂಗು ಕುಂದೂರು ಗ್ರಾಮಸ್ಥರಿಂದ ಬಲವಾಗಿ ಕೇಳಿಬಂದಿದೆ.

Leave a Reply

Your email address will not be published. Required fields are marked *