मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಬಾಳೆಹೊನ್ನೂರು: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರ ಕಳಚಿದ ಘಟನೆ – ತಪ್ಪಿದ ಭಾರಿ ಅನಾಹುತ!

---Advertisement---

 

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸರ್ಕಾರಿ ಬಸ್ಸೊಂದು ಚಲಿಸುತ್ತಿದ್ದ ವೇಳೆ ಚಕ್ರ ಕಳಚಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಬಾಳೆಹೊನ್ನೂರಿನ ಕಾಲಭೈರವೇಶ್ವರ ದೇಗುಲದ ಸಮೀಪ ಬಸ್ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಚಕ್ರವೊಂದು ಕಳಚಿ ರಸ್ತೆಗೆ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿದ್ದರು. ಬಸ್ ನಿಯಂತ್ರಣ ಕಳೆದುಕೊಂಡು ಉರುಳುವ ಭೀತಿ ಎದುರಾಗಿತ್ತಾದರೂ, ಚಾಲಕ ಬಸ್ಸನ್ನು ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

​ರಸ್ತೆ ಮಧ್ಯೆಯೇ ಬಸ್ಸಿನ ಚಕ್ರ ಕಳಚಿ ಬಿದ್ದಿರುವುದನ್ನು ಕಂಡು ಪ್ರಯಾಣಿಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರಿ ಬಸ್ಸುಗಳ ಸ್ಥಿತಿ ಇಷ್ಟು ಹದಗೆಟ್ಟಿದೆಯೇ? ನಮ್ಮ ಪ್ರಾಣದ ಜೊತೆ ಸರ್ಕಾರ ಆಟವಾಡುತ್ತಿದೆ” ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment