ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಂದು ದಿಢೀರನೆ ಆರಂಭವಾದ ಭಾರೀ ಮಳೆ ಮತ್ತು ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಾಫಿನಾಡು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವೆಡೆ ಅನಾಹುತಗಳು ಸಂಭವಿಸಿವೆ.
ಮೂಡಿಗೆರೆ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಗಾಳಿಯ ತೀವ್ರತೆಗೆ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ. ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದೆ.
ಇನ್ನೂ ಹಲವೆಡೆ ಭಾರೀ ಗಾಳಿಯಿಂದ ತೆಂಗಿನ ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಒಂದು ಸ್ಥಳದಲ್ಲಿ ಬೃಹತ್ ತೆಂಗಿನ ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದು ಅಪಾಯಕಾರಿಯಾಗಿ ನಿಂತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೂಡಿಗೆರೆ ಪಟ್ಟಣದ ಹೈಸ್ಕೂಲಿನ ಮೇಲ್ಛಾವಣಿಯ ಹೆಂಚುಗಳು ಗಾಳಿಯ ಬಿರುಗಾಳಿಗೆ ಹಾರಿ ಹೋಗಿವೆ. ಬಿದರಹಳ್ಳಿ ಗ್ರಾಮದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಆಸ್ತಿ ನಷ್ಟ ಸಂಭವಿಸಿದೆ.
ಪಟ್ಟಣದ ಹಲವೆಡೆ ಗಾಳಿ-ಮಳೆಯ ತೀವ್ರತೆಗೆ ವಾಹನಗಳು ನಿಂತಲ್ಲೇ ನಿಂತಿರುವ ದೃಶ್ಯ ಕಂಡುಬಂದಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ ಭಾಗದಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಮಲೆನಾಡು ಪ್ರದೇಶದ ಜನತೆ ಕಂಗಾಲಾಗಿದ್ದಾರೆ.
ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಭಾರೀ ಮಳೆಯಿಂದ ಮೂಡಿಗೆರೆ ತಾಲೂಕಿನಾದ್ಯಂತ ನಾನಾ ಅವಾಂತರ














Leave a Reply