ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೇಖಾನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಹೊರನಾಡಿಗೆ ತೆರಳುತ್ತಿದ್ದ ಈ ಕಾರು, ತೀವ್ರ ವೇಗ ಹಾಗೂ ನಿಯಂತ್ರಣ ತಪ್ಪಿದ ಕಾರಣ ಎರಡು ಬಾರಿ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಆದರೂ ಭಾರೀ ಅನಾಹುತ ತಪ್ಪಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕಾರಿನಲ್ಲಿದ್ದ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಸಹಾಯದಿಂದ ಕಂದಕಕ್ಕೆ ಬಿದ್ದ ಕಾರನ್ನು ಮೇಲಕ್ಕೆ ಎತ್ತಲಾಯಿತು.















Leave a Reply