ಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

Spread the love

ಚಿಕ್ಕಮಗಳೂರು: ಸ್ನೇಹಿತನ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿಯೊಬ್ಬರು ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ದಾರುಣ ಘಟನೆ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಬಳಿ ನಡೆದಿದೆ.

ಮೃತಪಟ್ಟ ಯುವಕನನ್ನು ಗದಗ ಮೂಲದ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಅಭಿಷೇಕ್ ತನ್ನ ಸ್ನೇಹಿತನ ಮದುವೆಗಾಗಿ ಸ್ನೇಹಿತರೊಂದಿಗೆ ಆಗಮಿಸಿದ್ದರು. ಅವರು ಬನ್ನೂರು ಗ್ರಾಮದ ಸಮೀಪದ ಹೋಂ ಸ್ಟೇ ಒಂದರಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಲು ಹೋದ ಅಭಿಷೇಕ್ ನೀರಿನಲ್ಲಿ ನಾಪತ್ತೆಯಾಗಿದ್ದರು.

​ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೀವ್ರ ಶೋಧ ನಡೆಸಿದರು.  ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ.ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *