ಅಯ್ಯನಕೆರೆಯಲ್ಲಿ ಈಜಲು ಹೋದ 13 ವರ್ಷದ ಬಾಲಕ ಜಲಸಮಾಧಿ!

Spread the love

 

 

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಈಜಲು ತೆರಳಿದ್ದ 13 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದು, ಈತ ತನ್ನ ದೊಡ್ಡಮ್ಮ ಹಾಗೂ ನಾಲ್ವರು ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ನೇಹಿತರೊಂದಿಗೆ ಸೇರಿ ಈಜುತ್ತಿದ್ದ ಪೃಥ್ವಿರಾಜ್ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ ಈ ವೇಳೆ ಉಳಿದವರು ರಕ್ಷಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆಯೇ ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *