ಸೂತಕದ ಮನೆಯಲ್ಲಿ ಸಂಭ್ರಮ ಸರಿಯೇ…?! – ಸಿ.ಟಿ. ರವಿ
1 min readಚಿಕ್ಕಮಗಳೂರು : ಎರಡ್ಮೂರು ದಿನದ ಮಳೆಗೆ ೧೩ ಜನ ಅಕಾಲಿಕ ಮೃತ್ಯವಿಗೀಡಾಗಿದ್ದಾರೆ, ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ ಎಂದು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಟಿ. ರವಿ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು.
ಸಿದ್ದರಾಮಯ್ಯನವರ ೭೫ ವರ್ಷದ ಹುಟ್ಟಿದ ದಿನವನ್ನು ಸಿದ್ದರಾಮೋತ್ಸವ ಹೆಸರಿನಲ್ಲಿ, ಆಚರಿಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಟಿಸಿದ ಅವರು. ದೇವರು ಸಿದ್ದರಾಮಯ್ಯನವರಿಗೆ ಆಯಸ್ಸು-ಆರೋಗ್ಯ ಕೊಟ್ಟು ಕಾಪಾಡಲಿ, ಆದರೆ ಎರಡ್ಮೂರು ದಿನದ ಮಳೆಗೆ ೧೩ ಜನ ಅಕಾಲಿಕ ಮೃತ್ಯವಿಗೀಡಾಗಿದ್ದಾರೆ. ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ, ಎಂದು ಪ್ರಶ್ನಿಸಿದ್ದರೆ. ಕಾಂಗ್ರೆಸ್ ಸಂವೇದನಾಶೀಲತೆ ಕಳೆದುಕೊಳ್ತಾ ಇದೆ. ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರೆಲ್ಲಾ ಬಂದಿದ್ದಾರೆ, ಸಂಕಷ್ಟದಲ್ಲಿದ್ದಾಗ ಹಾಡಿ-ಹೊಗಳೋದು ಮಾನವೀಯತೆ ಇರೋರ್ಗೆ ಶೋಭೆ ತರೋದಲ್ಲ. ಬಿಜೆಪಿ ಸರ್ಕಾರವೂ ೩ ವರ್ಷದ ತುಂಬಿದ್ದಕ್ಕೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕರ್ತ ಪ್ರವೀಣ್ ಸಾವನ್ನಪ್ಪಿದ್ದಕ್ಕೆ ಎಲ್ಲರೂ ಒಮ್ಮತದ ನಿರ್ಧಾರ ಮಾಡಿ ರದ್ದು ಮಾಡಿದ್ವಿ. ಅಂದು ನಮಗೆ ಪ್ರಶ್ನಿಸಿದ್ದರು, ಇಂದು ಸೂತಕದ ಮನೆಯಲ್ಲಿ ಸಂಭ್ರಮ ಅಂತ ಕೆಲವರಿಗಾದರೂ ಅನ್ನಿಸಬೇಕಿತ್ತು ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g