ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು
1 min read
ಚಿಕ್ಕಮಗಳೂರು : ಆನ್ ಲೈನ್ ಎಡವಟ್ಟಿನಿಂದ ಟಿಇಟಿ ಪರೀಕ್ಷೆಯ ಅಭ್ಯರ್ಥಿ ಪರೀಕ್ಷೆ ಬರೆಯದೇ ವಂಚಿತರಾದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಇಂದು ಚಿಕ್ಕಮಗಳೂರು ನಗರದ ವಿವಿಧ ಕಾಲೇಜುಗಳಲ್ಲಿ ಟಿಇಟಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆಗೆಂದು ರಾಜ್ಯದ ವಿವಿಧ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸಿದ್ದರು. ಆದರೆ, ಆನ್ ಲೈನ್ ಎಡವಟ್ಟಿನಿಂದ ಬಳ್ಳಾರಿ ಮೂಲದ ವಿದ್ಯಾರ್ಥಿಯೋರ್ವ ಪರೀಕ್ಷೆ ಬರೆಯಲಾಗದೇ ಸರ್ಕಾರ, ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಭ್ಯರ್ಥಿ ಆನ್ ಲೈನ್ ನಲ್ಲಿ ಹಾಲ್ ಟಿಕೆಟ್ ತೆಗೆದುಕೊಂಡ ಆರಂಭದಲ್ಲಿ ಒಂದು ಕಾಲೇಜು ತೋರಿಸಿದೆ. ಅಲ್ಲಿಗೆ ಹೋದರೆ ಅಲ್ಲಿ ಆತನ ರಿಜಿಸ್ಟರ್ ನಂಬರ್ ಇಲ್ಲ. ಮತ್ತೊಮ್ಮೆ ಹಾಲ್ ಟಿಕೆಟ್ ನೋಡಿದರೆ ಆಗ ಮತ್ತೆ ಬೇರೆ ಕಾಲೇಜು ತೋರಿಸಿದೆ. ಕೂಡಲೇ ಆತ ಹಾಲ್ ಟಿಕೆಟ್ ಪ್ರಿಂಟ್ ಔಟ್ ತೆಗೆಸಲು ಸಾಧ್ಯವಾಗಿಲ್ಲ. ಭಾನುವಾರವಾದ ಕಾರಣ ಕಂಪ್ಯೂಟರ್ ಸೆಂಟರ್ ಗಳು ಬಾಗಿಲು ಹಾಕಿದ್ದು ಪ್ರಿಂಟ್ ಔಟ್ ತೆಗೆಯಲು ಆಗಿಲ್ಲ. ಕೂಡಲೇ ಆತ ಎತಡನೇ ಕಾಲೇಜಿನ ಬಳಿಯೂ ಬಂದರೂ ಕೊಠಡಿ ಮೇಲ್ವಿಚಾರಕರು ಪರೀಕ್ಷೆ ಬರೆಯಲು ಬಿಟ್ಟಿಲ್ಲ. ಇದರಿಂದ ಬಳ್ಳಾರಿಯಿಂದ ಬಂದು ಪರೀಕ್ಷೆ ಬರೆಯಲು ಸಾಧ್ಯವಾಗದ ಕಾರಣ ವಿದ್ಯಾರ್ಥಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಧಿಕಾರಿಗಳ ಯಡವಟ್ಟಿನಿಂದ ನಾನು ಪರೀಕ್ಷೆ ಬರೆಯಲು ಆಗಿಲ್ಲ ಎಂದು ಸರ್ಕಾರ-ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g