October 18, 2024

MALNAD TV

HEART OF COFFEE CITY

ದತ್ತಮಾಲಾ ಶೋಭಾಯಾತ್ರೆ, ಚಿಕ್ಕಮಗಳೂರು ನಗರ, ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

1 min read

ಶ್ರೀರಾಮಸೇನೆ ವತಿಯಿಂದ ಕಳೆದ ಏಳು ದಿನಗಳಿಂದ ಮಾಲೆ ಧರಿಸಿ ವೃತ್ತದಲ್ಲಿದ್ದ ದತ್ತಮಾಲಾಧಾರಿಗಳು ಇಂದು (ಭಾನುವಾರ) ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಚಿಕ್ಕಮಗಳೂರು ನಗರದ ಶಂಕರಮಠದಲ್ಲಿ ಬಹಿರಂಗ ಸಮಾವೇಶ ನಡೆಸಿ ಧರ್ಮಭಾಷಣ ಮಾಡಲಿದ್ದಾರೆ. ಬಳಿಕ ಸುಮಾರು ಐದು ಸಾವಿರ ದತ್ತಮಾಲಾಧಾರಿಗಳು ಶಂಕರಮಠದಿಂದ ಹನುಮಂತಪ್ಪ ವೃತ್ತದ ಮೂಲಕ ಎಂ.ಜಿ.ರಸ್ತೆಯಲ್ಲಿ ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. ಶೋಭಾಯಾತ್ರೆ ಆಜಾದ್ ಪಾರ್ಕ್‍ನಲ್ಲಿ ಕೊನೆಗೊಂಡ ಬಳಿಕ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ದತ್ತಮಾಲಾ ಅಭಿಯಾನದ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಎಸ್.ಪಿ. ಉಮಾ ಪ್ರಶಾಂತ್ ಸೇರಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಮೂರು ಡಿ.ವೈ.ಎಸ್.ಪಿ, 18 ಸಿಪಿಐ, 67 ಪಿ.ಎಸ್.ಐ, 147 ಎಎಸ್‍ಐ, 851 ಸಿಎಚ್‍ಸಿ ಮತ್ತು ಸಿಪಿಸಿ ಹಾಗೂ 200 ಹೋಮ್ ಗಾರ್ಡ್‍ಗಳನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಹೊರ ಜಿಲ್ಲೆಗಳಿಂದ ಆಗಮಿಸುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು 26 ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೆ ಗಿರಿಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧೀಸಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!