ಕಡೂರು ತಾಲ್ಲೂಕಿನಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಅವರ ಆಪ್ತ ಸಹಾಯಕರು ಸರ್ಕಾರಿ ಸಭೆಯ ವಹಿಸಿರುವುದು ತೀವ್ರ ಚರ್ಚೆಗೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರು ಕಂದಾಯ ಗ್ರಾಮ ಹಾಗೂ ತಾಲ್ಲೂಕಿನ ಅಭಿವೃದ್ಧಿ ಕುರಿತು ಪ್ರಮುಖ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಭೂ ದಾಖಲೆಗಳ ಉಪನಿರ್ದೇಶಕರು, ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಹಾಗೂ ಪಿಡಿಓಗಳಂತಹ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಕಡೂರು ಶಾಸಕರಾದ ಕೆ.ಎಸ್. ಆನಂದ್ ಅವರು ಉಪಸ್ಥಿತರಿರಬೇಕಿತ್ತು, ಆದರೆ ಶಾಸಕರ ಗೈರುಹಾಜರಿಯಲ್ಲಿ ಅವರ ಆಪ್ತ ಸಹಾಯಕ ಮಂಜುನಾಥ್ ಅವರು ಶಾಸಕರಿಗಾಗಿ ಮೀಸಲಾದ ಜಾಗದಲ್ಲಿ ಕುಳಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡುವ ಮೂಲಕ ಸಭೆ ನಡೆಸಿದ್ದಾರೆ. ಸರ್ಕಾರದ ಅಧಿಕೃತ ಸಭೆಯನ್ನು ಶಾಸಕರ ಬದಲಿಗೆ ಅವರ ಪಿಎ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ‘ಸೂಪರ್ ಸಿಎಂ’ ಮಾದರಿಯ ದರ್ಬಾರ್ ಎಂದು ಟೀಕೆಗೆ ಒಳಗಾಗಿದೆ. ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಅವರ ಆಪ್ತ ಸಹಾಯಕರು ಚಲಾಯಿಸುತ್ತಿರುವುದು ಆಡಳಿತಾತ್ಮಕ ಶಿಷ್ಟಾಚಾರದ ಉಲ್ಲಂಘನೆ ಎಂಬ ಮಾತುಗಳು ಕೇಳಿಬರುತ್ತಿವೆ.










Leave a Reply