October 18, 2024

MALNAD TV

HEART OF COFFEE CITY

ಪತಿಯನ್ನು ದೊಣ್ಣೆಯಿಂದ ಹೊಡೆದು ಸಾಯಿಸಿದ ಕ್ರೂರಿ ಪತ್ನಿ

1 min read

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಕಳೆದ ರಾತ್ರಿ ಗಂಡ ಹೆಂಡತಿಯ ನಡುವೆ ಜಗಳವಾಗಿದ್ದು ಮಾತಿಗೆ ಮಾತು ಬೆಳೆದು ಪತ್ನಿ ಭಾರತಿ ಸುರೇಶ್ ಎಂಬ ಗಂಡನನ್ನು ಹೊಡೆದು ಹತ್ಯೆ ಮಾಡಿದ್ದಾಳೆ. ಬಸವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಗಂಡ ಹೆಂಡತಿ ನಡುವಿನ ವಿರಸ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಬಡಾವಣೆಯಲ್ಲಿ ನಡೆದಿದೆ. ಸುರೇಶ್(53) ಮೃತಪಟ್ಟ ಪತಿಯಾಗಿದ್ದು, ಆತನ ಪತ್ನಿ ಭಾರತಿ ಎಂಬಾಕೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಂದಿದ್ದಾಳೆ. ಕಳೆದ ರಾತ್ರಿ ಮನೆಯಲ್ಲಿ ಗಂಡ ಹೆಂಡತಿ ನಡುವೆ ವಿಪರೀತ ಜಗಳವಾಗಿದ್ದು, ಮರಗೆಲಸ ಮಾಡಿಕೊಂಡು ಮನೆಗೆ ಬಂದ ಪತಿ ಸುರೇಶ್ ಜೊತೆ ಭಾರತಿ ಹೊಡೆದಾಟಕ್ಕೆ ಇಳಿದಿದ್ದಾಳೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿ ಇದ್ದ ಮರದ ದೊಣ್ಣೆ ತೆಗೆದುಕೊಂಡು ಬಲವಾಗಿ ತಲೆಗೆ ಬಾರಿಸಿದ್ದಾಳೆ. ಈ ವೇಳೆ ಕುಸಿದು ಬಿದ್ದ ಸುರೇಶ ಹೆಡ್ ಇಂಜ್ಯುರಿ ಉಂಟಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ

 


ಕೊಲೆ ಪ್ರಕರಣ ದಾಖಲು ಮಾಡಿ ಕೊಂಡಿರುವ ಬಸವನಹಳ್ಳಿ ಪೊಲೀಸರು ಆರೋಪಿ ಭಾರತಿಯನ್ನ ಬಂಧಿಸಿದ್ದಾರೆ. ಕೊಲೆಯಾದ ಮನೆಗೆ ತೆರಳಿ ಸ್ಥಳ ಮಹಜರು ಮಾಡಲಾಗಿದೆ ಇತ್ತ ತಂದೆ ಇಹಲೋಕ ತ್ವಜಿಸಿದರೆ ತಾಯಿ ಜೈಲು ಪಾಲಾಗಿದ್ದು ಇಬ್ಬರು ಹೆಣ್ಣುಮಕ್ಕಳು ಬೀದಿಪಾಲಾಗಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!