September 8, 2024

MALNAD TV

HEART OF COFFEE CITY

ರಸ್ತೆ ಜಾಗದಲ್ಲಿ ಮನೆ ನಿರ್ಮಾಣ ಆರೋಪ ಮಹಿಳೆ ಮೇಲೆ ಗ್ರಾಮಸ್ಥರಿಂದ ಹಲ್ಲೆ

1 min read

 

 

ಹಲವು ವರ್ಷಗಳಿಂದ ವಾಸವಿರುವ ಮನೆಯನ್ನೇ ರಸ್ತೆಗೆ ಜಾಗ ಬಿಡುವಂತೆ ಒತ್ತಾಯಿಸಿ ಕುಟುಂಬಸ್ಥರ ಮೇಲೆ ಗ್ರಾಮದ ಹಲವರು ಏಕಾಏಕಿ ಹಲ್ಲೇ ಮಾಡಿರುವ ಘಟನೆ ಕಡೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಇಷ್ಟು ದಿನ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಓಡಾಡುತ್ತಿದ್ದ ಸ್ಥಳೀಯರು ಏಕಾಏಕಿ ಮನೆಯ ಬಳಿ ಬಂದು ರಸ್ತೆಗೆ ಜಾಗ ಬಿಟ್ಟು ಕೊಡುವಂತೆ ಮಹಿಳೆ ಸೇರಿದಂತೆ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಪುರಸಭೆ ನೀಡಿರುವ ದಾಖಲೆ ಇ ಸ್ವತ್ತು ಎಲ್ಲಾ ಇದ್ದರೂ ಮಹಿಳೆಗೆ ನಿತ್ಯವೂ ಪೀಡಿಸುತ್ತಿರುವ ಕೆಲವರು ಮನೆಯಲ್ಲಿ ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದು ಮಹಿಳೆ ಆರೋಪಿಸಿದ್ದಾಳೆ. ಇದೀಗ ನೊಂದಿರುವ ಮಹಿಳೆ ನ್ಯಾಯ ಕೊಡಿಸುವಂತೆ ಕಡೂರು ಪುರಸಭೆಗೆ ಮನವಿ ಮಾಡಿದ್ದಾಳೆ. ಉದ್ದೇಶಪೂರ್ವಕವಾಗಿ ಬೇಕು ಬೇಕಂತಲೇ ನಮ್ಮ ಕುಟುಂಬವನ್ನು ಕೆಲವರು ಟಾರ್ಗೆಟ್ ಮಾಡಿಕೊಂಡಿದ್ದಾರೆ.

 

 

 

ಸೂಕ್ತ ದಾಖಲೆಗಳಿದ್ದರೂ ಮನೆಗೆ ಸೇರಿದ ಜಾಗದಲ್ಲಿ ರಸ್ತೆ ಬಿಡುವಂತೆ ಹೇಳುತ್ತಿರುವುದು ಸರಿಯಲ್ಲ ಎಂದು ಅಧಿಕಾರಿಗಳಿಗೆ ಕುಟುಂಬಸ್ಥರು ದೂರು ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!