September 17, 2024

MALNAD TV

HEART OF COFFEE CITY

ಭದ್ರಾ ನದಿಯಲ್ಲಿ ಮುಳಗಿ ಯುವಕ ಸಾವು

1 min read

ಭದ್ರಾ ನದಿಯಲ್ಲಿ ಸ್ನಾನಕ್ಕೆ ಎಂದು ಇಳಿದ ಯುವಕ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ನಡೆದಿದೆ. ಮೃತನನ್ನ ಬೆಂಗಳೂರು ನಗರದ ಶ್ರೀನಗರ ಮೂಲದ 25 ವರ್ಷದ ಗೋಕುಲ್ ಎಂದು ಗುರುತಿಸಲಾಗಿದೆ. ಮೃತ ಯುವಕ ಕಳೆದ ರಾತ್ರಿ ತನ್ನ ಮೂವರು ಸ್ನೇಹಿತರ ಜೊತೆ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬಂದಿದ್ದರು. ವಿಜಯದಶಮಿಯ ದಿನವಾದ ಇಂದು ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಪೂಜೆ ಮಾಡಿಸಿಕೊಂಡು ಅನ್ನಪೂರ್ಣೇಶ್ವರಿ ದರ್ಶನದ ಬಳಿಕ ಪ್ರಸಾದ ಸವಿದು ಬೆಂಗಳೂರಿಗೆ ಹಿಂದಿರುಗಿದ್ದರು. ಹೊರನಾಡಿನಿಂದ 10 ಕಿಲೋಮೀಟರ್ ಮುಂದೆ ಬಂದ ಯುವಕರು ಹೆಬ್ಬಾಳ ಸೇತುವೆ ಬಳಿ ಭದ್ರಾ ನದಿಯಲ್ಲಿ ಸ್ನಾನ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ನಾನಕ್ಕೆ ಎಂದು ಇಳಿದ ಯುವಕ ಗೋಕುಲ್ ಕಾಲು ಚಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಗೋಕುಲ್ ಜೊತೆಗಿದ್ದ ಸ್ನೇಹಿತರು ಆತನನ್ನ ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಭದ್ರಾ ನದಿಯಲ್ಲಿ ಮೇಲೆ ನೋಡಲು ನೀರು ನಿಧಾನವಾಗಿ ಹರಿಯುತ್ತಿದ್ದರು ಕೂಡ, ಒಳಭಾಗದಲ್ಲಿ ಅತ್ಯಂತ ವೇಗವಾಗಿ ಹರಿಯುತ್ತಿರುತ್ತದೆ. ಹಾಗಾಗಿ, ಗೋಕುಲ್ ಕಾಲು ಜಾರಿ ನೀರಿಗೆ ಬಿದ್ದ ಕೂಡಲೇ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಳಸ ಪೊಲೀಸರು ಮೃತ ದೇಹವನ್ನು ಕಳಸ ತಾಲೂಕು ಆಸ್ಪತ್ರೆಗೆ ತಂದಿದ್ದಾರೆ. ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!