ಎರಡು ಎತ್ತುಗಳನ್ನು ಬಲಿ ಪಡೆದ ತೆರೆದ ಬಾವಿ  

Spread the love

 

 

ಚಿಕ್ಕಮಗಳೂರು: ತೆರೆದ ಬಾವಿಯೊಂದು ಎರಡು ಎತ್ತುಗಳ ಜೀವ ಬಲಿ ಪಡೆದ ದಾರುಣ ಘಟನೆ ಶೃಂಗೇರಿ ತಾಲೂಕಿನ ಹಲಗಾರ್ ಆಲಂದೂರು ಗ್ರಾಮದಲ್ಲಿ ನಡೆದಿದೆ. ಮೇಯಲು ತೆರಳಿದ್ದ ಎತ್ತುಗಳು ಸುಮಾರು 20 ಅಡಿ ಆಳದ ಬಾವಿಗೆ ಬಿದ್ದು, ಒಳಗಿದ್ದ ಕೆಸರಿನಲ್ಲಿ ಸಿಲುಕಿ ಪ್ರಾಣಾಪಾಯಕ್ಕೆ ಸಿಲುಕಿದ್ದವು.

ಎತ್ತುಗಳ ನರಳಾಟ ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸುಮಾರು ಎರಡು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಎತ್ತುಗಳನ್ನು ಮೇಲಕ್ಕೆತ್ತಲು ಹರಸಾಹಸ ಪಟ್ಟರು. ಆದರೆ ಬಾವಿಯೊಳಗಿನ ಕೆಸರಿನಲ್ಲಿ ಸಿಲುಕಿ ಉಸಿರುಗಟ್ಟಿದ್ದ ಕಾರಣ, ಸಿಬ್ಬಂದಿಯ ನಿರಂತರ ಪ್ರಯತ್ನಗಳ ನಡುವೆಯೂ ಎರಡೂ ಎತ್ತುಗಳನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಈ ದುರಂತದ ಬಳಿಕ ಕಾಲುದಾರಿಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿರುವ ತೆರೆದ ಬಾವಿಗಳನ್ನು ಕೂಡಲೇ ಮುಚ್ಚುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *