🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಮಲೆನಾಡಿನಲ್ಲಿ ಮುಂದಿನ 3 ದಿನ ವರುಣನ ಆರ್ಭಟ; ಕಾಫಿನಾಡಿಗೆ ರೆಡ್ ಅಲರ್ಟ್ ಘೋಷಣೆ!

---Advertisement---

 

ಚಿಕ್ಕಮಗಳೂರು: ಕಾಫಿನಾಡು ಹಾಗೂ ಮಲೆನಾಡು ಭಾಗದಲ್ಲಿ ನೈಋತ್ಯ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಾಫಿನಾಡು ಜಿಲ್ಲಾಡಳಿತವು ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಹೈ ಅಲರ್ಟ್ ಘೋಷಿಸಿದೆ.

​ಜೂನ್ 9 ರಿಂದ ಜೂನ್ 11ರವರೆಗೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಾಳೆ (ಜೂನ್ 9) ‘ಆರೆಂಜ್ ಅಲರ್ಟ್’ ಹಾಗೂ ಜೂನ್ 10 ಮತ್ತು 11ರಂದು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

​ಜಿಲ್ಲಾಡಳಿತದಿಂದ ಪ್ರಮುಖ ಮಾರ್ಗಸೂಚಿಗಳು ಮತ್ತು ಎಚ್ಚರಿಕೆಗಳು:

​ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ: ಮಳೆಯ ಆರ್ಭಟಕ್ಕೆ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಇಳಿಯಬಾರದು ಎಂದು ಸೂಚಿಸಲಾಗಿದೆ.

​ಪ್ರವಾಸಿಗರಿಗೆ ಹೈ ಅಲರ್ಟ್: ಮಲೆನಾಡಿನ ಸೌಂದರ್ಯ ಸವಿಯಲು ಬರುವ ಪ್ರವಾಸಿಗರು ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಜಾಗರೂಕರಾಗಿರಬೇಕು. ಜಲಪಾತ, ನದಿ ಹಾಗೂ ಅಪಾಯಕಾರಿ ತಿರುವುಗಳಿರುವ ಘಾಟಿ ಪ್ರದೇಶಗಳಿಗೆ ಭೇಟಿ ನೀಡುವಾಗ ಕಡ್ಡಾಯವಾಗಿ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು.

​ಮರಗಳ ಕೆಳಗೆ ನಿಲ್ಲಬೇಡಿ: ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮರಗಳ ಸಮೀಪ ಆಶ್ರಯ ಪಡೆಯಬಾರದು ಮತ್ತು ವಾಹನಗಳನ್ನು ಮರಗಳ ಕೆಳಗೆ ನಿಲ್ಲಿಸದಂತೆ ಎಚ್ಚರಿಕೆ ನೀಡಲಾಗಿದೆ.

​ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ: ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲೆಯ ಎಲ್ಲಾ ನಿಯೋಜಿತ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ (ಹೆಡ್‌ಕ್ವಾರ್ಟರ್ಸ್) ಮೊಕ್ಕಾಂ ಹೂಡಬೇಕು ಮತ್ತು ಯಾವುದೇ ಪರಿಸ್ಥಿತಿಯನ್ನೂ ನಿರ್ವಹಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ.

Join WhatsApp

Join Now

Join Telegram

Join Now

Leave a Comment