ಬ್ಯಾಂಕಿನಲ್ಲಿಟ್ಟ ಚಿನ್ನವನ್ನೆಲ್ಲಾ ಗುಳುಂ ಮಾಡಿದ ಬ್ಯಾಂಕ್ ಸಿಬ್ಬಂದಿಗಳು ಚಿನ್ನ ಇಟ್ಟು ಲೋನ್ ಪಡೆದವರ ಚಿನ್ನವೇ ಮಾಯ…!

Spread the love

ಚಿಕ್ಕಮಗಳೂರು: ಕಾಫಿನಾಡಿನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸಾರ್ವಜನಿಕರ ಆಸ್ತಿಯನ್ನು ಕಾಯಬೇಕಿದ್ದ ಸಿಬ್ಬಂದಿಗಳೇ ಭಕ್ಷಕರಾಗಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿಕೊಂಡು ಗ್ರಾಹಕರು ಅಡವಿಟ್ಟಿದ್ದ ಕೋಟ್ಯಂತರ ಮೌಲ್ಯದ ಅಸಲಿ ಚಿನ್ನವನ್ನು ಗುಳುಂ ಮಾಡಿ, ಆ ಜಾಗದಲ್ಲಿ ನಕಲಿ ಚಿನ್ನವನ್ನಿಟ್ಟು ಮಹಾ ವಂಚನೆ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

​ಬ್ಯಾಂಕ್ ಮ್ಯಾನೇಜರ್ ಸಂದೀಪ್, ಸಿಬ್ಬಂದಿ ನಾರಾಯಣಸ್ವಾಮಿ ಸೇರಿದಂತೆ ಐವರ ವಿರುದ್ಧ ಈ ಬೃಹತ್ ಹಗರಣದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2020ರಿಂದ 2025ರ ಅವಧಿಯಲ್ಲಿ ಈ ದಂಧೆ ನಡೆದಿದೆ ಎಂದು ಶಂಕಿಸಲಾಗಿದ್ದು, ಗ್ರಾಹಕರಿಗೆ ಗೊತ್ತಿಲ್ಲದಂತೆ ಅವರ ಹೆಸರಿನಲ್ಲೇ ಹೆಚ್ಚುವರಿ ಚಿನ್ನದ ಸಾಲ ಪಡೆದು ಹಣ ಲೂಟಿ ಮಾಡಲಾಗಿದೆ.

​ಸಾಲ ತೀರಿಸಿದರೂ ತಮ್ಮ 80 ರಿಂದ 142 ಗ್ರಾಂವರೆಗಿನ ಚಿನ್ನ ವಾಪಸ್ ಸಿಗದೆ ಗ್ರಾಹಕರು ಕಂಗಾಲಾಗಿದ್ದಾರೆ. ಅಲ್ಲದೆ, ಸಾರ್ವಜನಿಕರು ಕಷ್ಟಪಟ್ಟು ಕೂಡಿಟ್ಟಿದ್ದ ಎಫ್.ಡಿ (ಸ್ಥಿರ ಠೇವಣಿ) ಹಣಕ್ಕೂ ಈ ಗಿರಾಕಿಗಳು ಕನ್ನ ಹಾಕಿದ್ದಾರೆ ಎನ್ನಲಾಗಿದೆ. ಸ್ಥಳೀಯವಾಗಿ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಸಂತ್ರಸ್ತ ಗ್ರಾಹಕರು ಈಗ ನ್ಯಾಯಕ್ಕಾಗಿ ಬೆಂಗಳೂರಿನ ಬ್ಯಾಂಕ್ ಕೇಂದ್ರ ಕಚೇರಿಯತ್ತ ಮುಖ ಮಾಡಿದ್ದಾರೆ.

Leave a Reply

Your email address will not be published. Required fields are marked *