ಎನ್.ಆರ್.ಪುರ: ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕಾಫಿ ತೋಟದ ಮೇಲ್ವಿಚಾರಕರಾದ ಜಾರ್ಜ್ ಎಂಬುವರಿಗೆ ಸೇರಿದ ಮಾರುತಿ 800 ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಭಸ್ಮವಾಗಿದೆ.
ತೋಟದ ಕಾರ್ಮಿಕರನ್ನು ಕೆಲಸಕ್ಕೆ ಬಿಟ್ಟು ಬಂದ ಜಾರ್ಜ್ ಅವರು ತಮ್ಮ ಮನೆ ಮುಂದೆ ಕಾರನ್ನು ನಿಲ್ಲಿಸಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ವಾಹನವನ್ನು ಆವರಿಸಿಕೊಂಡಿದ್ದು, ವಾಹನವು ಕಣ್ಣೆದುರೇ ಸುಟ್ಟು ಕರಕಲಾಗಿದೆ. ಕಾರ್ಮಿಕರು ಕಾರಿನಲ್ಲಿದ್ದಾಗಲೇ ಈ ಘಟನೆ ನಡೆದಿದ್ದರೆ ದೊಡ್ಡ ಮಟ್ಟದ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿತ್ತು. ಆದರೆ ಕಾರ್ಮಿಕರನ್ನು ಇಳಿಸಿದ ಬಳಿಕವೇ ಈ ಅವಘಡ ಸಂಭವಿಸಿರುವುದರಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.













Leave a Reply