ಚಿಕ್ಕಮಗಳೂರು: ಡೆತ್ ನೋಟ್ ಬರೆದಿಟ್ಟು ಸಹಕಾರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ; 9 ಜನರ ವಿರುದ್ಧ ಎಫ್‌ಐಆರ್

Spread the love

 

​ತರೀಕೆರೆ: ಕ್ಷುಲ್ಲಕ ಕಾರಣಕ್ಕೆ ಮಾನಸಿಕ ಕಿರುಕುಳ ಹಾಗೂ ಅವಮಾನಕ್ಕೊಳಗಾದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರು ಸುದೀರ್ಘ ಡೆತ್ ನೋಟ್ ಹಾಗೂ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತರೀಕೆರೆ ತಾಲೂಕಿನ ಹೆಚ್.ಮಲ್ಲೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಹೆಚ್.ಮಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2010 ರಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಷಾ (45) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತರು ಆತ್ಮಹತ್ಯೆಗೂ ಮುನ್ನ 3 ಪುಟಗಳ ಸುದೀರ್ಘ ಡೆತ್ ನೋಟ್ ಹಾಗೂ ಸುಮಾರು 25 ನಿಮಿಷಗಳ ಸುದೀರ್ಘ ವಿಡಿಯೋವನ್ನು ಚಿತ್ರೀಕರಿಸಿದ್ದು, ತಮ್ಮ ಸಾವಿಗೆ ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ.

ಸಂಘಕ್ಕೆ ಹೊಸ ಕಮಿಟಿ ಬಂದ ಮೇಲೆ ಹಳೆಯ ಲೆಕ್ಕಪತ್ರಗಳ ವಿಚಾರವಾಗಿ ಉಷಾ ಅವರಿಗೆ ತೀವ್ರ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. “2020ರ ಕೆಲಸಕ್ಕೆ ಈಗ ಬಿಲ್ ಕೇಳುತ್ತಿದ್ದಾರೆ, ಅದನ್ನು ಎಲ್ಲಿಂದ ತರಲಿ? ಹಣ ದುರುಪಯೋಗವಾಗಿದೆ ಎಂದು ಸುಳ್ಳು ಆರೋಪ ಮಾಡಿ ಕೋರ್ಟ್, ಪೊಲೀಸ್ ಎಂದು ಹೆದರಿಸಲಾಗುತ್ತಿದೆ” ಎಂದು ಅವರು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *