September 17, 2024

MALNAD TV

HEART OF COFFEE CITY

ದತ್ತಪೀಠ ಆಡಳಿತ ಮಂಡಳಿ ರಚನೆಗೆ ಕೋಮು ಸೌಹಾರ್ದ ವೇದಿಕೆ ವಿರೋಧ

1 min read

 

ಚಿಕ್ಕಮಗಳೂರು : ದತ್ತಪೀಠಕ್ಕೆ ಸಂಬಂಧಿಸಿದಂತೆ ಸರ್ಕಾರ 8 ಮಂದಿಯ ವ್ಯವಸ್ಥಾಪನಾ ಸಮಿತಿ ನೇಮಿಸಿದ್ದು, ಕಮಿಟಿಯಲ್ಲಿ ಏಳು ಮಂದಿ ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದವರಾಗಿರುವ ಹಿನ್ನೆಲೆಯಲ್ಲಿ ಆ ಕಮಿಟಿಯನ್ನು ಅನುರ್ಜಿತಗೊಳಿಸಬೇಕು ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಸರ್ಕಾರವನ್ನ ಒತ್ತಾಯಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಸರ್ಕಾರ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಎಂಟು ಜನ ಸದಸ್ಯರನ್ನೊಳಗೊಂಡ ಆಡಳಿತ ಕಮಿಟಿಯನ್ನು ರಚನೆ ಮಾಡಲು ಆದೇಶಿಸಿದೆ. ಆದರೆ ಮುಸ್ಲಿಂ ಸಮುದಾಯದ ಓರ್ವರನ್ನು ಕಮಿಟಿ ಸದಸ್ಯರನ್ನಾಗಿ ನೇಮಿಸಿ ಉಳಿದ 7 ಮಂದಿಯನ್ನು ಒಂದೇ ಸಮುದಾಯಕ್ಕೆ ಸೇರಿದವರನ್ನು ನೇಮಿಸಲಾಗಿದೆ. ಈ ಮೂಲಕ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ ಎಂದು ಅವರು ಆರೋಪಿಸಿದ್ದಾರೆ. ಹಾಲಿ ಕಮಿಟಿಯನ್ನು ಅನೂರ್ಜಿತಗೊಳಿಸಬೇಕು ಹಾಗೂ ಎರಡು ಸಮುದಾಯದ ಸಮಾನ ಸದಸ್ಯರು ಮತ್ತು ಇಬ್ಬರು ಮಹಿಳೆಯನ್ನೊಳಗೊಂಡ ಪಾರದರ್ಶಕ ಕಮಿಟಿಯನ್ನ ಸರಕಾರ ಕೂಡಲೇ ರಚನೆ ಮಾಡಬೇಕು ಎಂದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!