ಪೊಲೀಸರ ಭದ್ರತೆಯಲ್ಲಿ ಚಿಕ್ಕಮಗಳೂರು ನಗರಕ್ಕೆ ಬಂದ ದತ್ತಾತ್ರೇಯ ಮೂರ್ತಿ
1 min read
ಚಿಕ್ಕಮಗಳೂರು : ನಾಲ್ಕು ವರ್ಷಗಳ ಬಳಿಕ ದತ್ತಾತ್ರೇಯ ಸ್ವಾಮಿ ವಿಗ್ರಹ ನಗರಕ್ಕೆ ಮರಳಿ ಬಂದಿದೆ. ದತ್ತ ಭಕ್ತರೊಬ್ಬರು ನೀಡಿದ ಅಪರೂಪ ಹಾಗೂ ಸುಂದರ ಮೂರ್ತಿಯನ್ನ ಕೊಡುಗೆಯಾಗಿ ನೀಡಿದ್ದರು. ಈ ದತ್ತಾತ್ರೇಯ ಸ್ವಾಮಿ ವಿಗ್ರಹವನ್ನು ಈ ಹಿಂದೆ ದತ್ತಮಾಲಾ ಅಭಿಯಾನದ ಶೋಭಯಾತ್ರೆಯಲ್ಲಿ ಮೆರವಣಿಗೆಗೆ ತೆಗೆದುಕೊಂಡು ಹೋಗಲು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಈ ವಿಗ್ರಹವನ್ನ ಪೊಲೀಸರು ವಶಪಡಿಸಿಕೊಂಡಿದ್ದರು. ಆದರೆ, ಈ ಬಾರಿ ದತ್ತಮಾಲಾ ಅಭಿಯಾನದ ಶೋಭಾಯಾತ್ರೆಯಲ್ಲಿ ಈ ದತ್ತಾತ್ರೇಯ ಸ್ವಾಮಿಯ ವಿಗ್ರಹವನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲು ಶ್ರೀರಾಮಸೇನೆ ನಿರ್ಧರಿಸಿದೆ.
ಶೋಭಾಯಾತ್ರೆಯಲ್ಲಿ ಮೆರವಣಿಗೆ ಮಾಡಲು ಜಿಲ್ಲೆಯ ಕಡೂರು ತಾಲೂಕಿನ ದೇವನೂರಿನ ಕಾಳಿ ಮಠದಲ್ಲಿದ್ದ ವಿಗ್ರಹವನ್ನು ಶ್ರೀರಾಮಸೇನೆ ಕಾರ್ಯಕರ್ತರು ಚಿಕ್ಕಮಗಳೂರು ನಗರಕ್ಕೆ ತಂದಿದ್ದಾರೆ. ಈ ವೇಳೆ ದತ್ತಾತ್ರೇಯ ಸ್ವಾಮಿ ವಿಗ್ರಹಕ್ಕೆ ಪೊಲೀಸರು ಬೆಂಗಾವಲು ನೀಡಿದ್ದರು. ಪೊಲೀಸರ ಬೆಂಗಾವಲಿನಲ್ಲಿ ದತ್ತಾತ್ರೇಯ ಸ್ವಾಮಿಯ ವಿಗ್ರಹವನ್ನು ಚಿಕ್ಕಮಗಳೂರು ನಗರಕ್ಕೆ ತರಲಾಯಿತು. ಎರಡು ದಿನದ ಹಿಂದೆ ರಾಜ್ಯಾದ್ಯಂತ ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿದ್ದಾರೆ. ಎಂಟು ದಿನಗಳ ವೃತದ ಬಳಿಕ ಇದೇ ನವೆಂಬರ್ ೧೩ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ ಮಾಡಿ ದತ್ತಾತ್ರೇಯ ಸ್ವಾಮಿಯ ವಿಗ್ರಹವನ್ನ ಮೆರವಣಿಗೆ ಮಾಡಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಎಂಟು ಸಾವಿರಕ್ಕೂ ಅಧಿಕ ದತ್ತಭಕ್ತರು ರಾಜ್ಯದ ವಿವಿಧ ಭಾಗದಿಂದ ಆಗಮಿಸುವ ನಿರೀಕ್ಷೆ ಇದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g