🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಬಿಜೆಪಿ ಮತ್ತು ಸಿ.ಟಿ. ರವಿ ವಿರುದ್ಧ ಜಿಲ್ಲಾ ರವೀಶ್ ಕ್ಯಾತನಬೀಡು ವಾಗ್ದಾಳಿ ಜಾತಿ ರಾಜಕಾರಣದ ಆರೋಪ ​ಚಿಕ್ಕಮಗಳೂರಿನಲ್ಲಿ ಶಾಂತಿ ಕದಡಲು ಬಿಜೆಪಿ ಯತ್ನ

---Advertisement---

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಸಿ.ಟಿ. ರವಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದ ಸಂವಿಧಾನವು ಸರ್ವ ಧರ್ಮ ಮತ್ತು ಜಾತಿಗಳನ್ನು ಸಮಾನವಾಗಿ ಕಾಣುವ ತತ್ವವನ್ನು ಹೊಂದಿದೆ, ಆದರೆ ಬಿಜೆಪಿ ಮತ್ತು ಸಿ.ಟಿ. ರವಿ ಅವರು ಸಮಾಜವನ್ನು ಒಡೆಯುವ ಹಾಗೂ ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಹಾಗೂ ವಿವಿಧ ಸಾಮಾಜಿಕ ವಿದ್ಯಮಾನಗಳನ್ನು ಉಲ್ಲೇಖಿಸಿರುವ ಕಾಂಗ್ರೆಸ್, ಬಿಜೆಪಿ ಕೇವಲ ಅಧಿಕಾರಕ್ಕಾಗಿ ಜಾತಿ ರಾಜಕಾರಣವನ್ನು ಮುನ್ನೆಲೆಗೆ ತರುತ್ತಿದೆ ಎಂದು ಕಿಡಿಕಾರಿದೆ.

​ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ನೀಡಲಾದ ಪರಿಹಾರದ ವಿಷಯದಲ್ಲೂ ರಾಜಕೀಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಧನ ವಿತರಿಸಲು ಕ್ರಮ ಕೈಗೊಂಡಿದ್ದರೂ, ಬಿಜೆಪಿ ನಾಯಕರು ಇದರಲ್ಲೂ ತಾರತಮ್ಯದ ಆರೋಪ ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರ ಸಂಕಷ್ಟದ ಸಮಯದಲ್ಲಿ ನೆರವಿಗೆ ಬರುವ ಬದಲು, ವಿಷಯವನ್ನು ದಿಕ್ಕು ತಪ್ಪಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಬಿಜೆಪಿ ನಿಲುವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

Join WhatsApp

Join Now

Join Telegram

Join Now

Leave a Comment