ಗಾಂಧಿ ಸ್ಮೃತಿ ಮತ್ತು ಜಾಥ ಕಾರ್ಯಕ್ರಮ..!
1 min readಚಿಕ್ಕಮಗಳೂರು: ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ನವ ಜೀವನ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮದ್ಯವರ್ಜನ ಶಿಬಿರಾರ್ಥಿಗಳೊಂದಿಗೆ ತಾಲೂಕು ಯೋಜನಾ ವ್ಯಾಪ್ತಿಯ ರಾಮನಹಳ್ಳಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗಾಂಧಿ ಸ್ಮೃತಿ ಮತ್ತು ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಕೊರಗಪ್ಪ ಪೂಜಾರಿ, ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮಗಳೂರು ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎನ್.ಸಿ ವಿಶ್ವನಾಥ , ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ, ನಾಗರಾಜ್ ರಾವ್ ಕಲ್ಕಟ್ಟೆ , ಮದ್ಯವರ್ಜನ ಶಿಬಿರದ ವ್ಯವಸ್ಥಾಪಕ ಅಧ್ಯಕ್ಷರು ರಮೇಶ್ , ಧರ್ಮರಾಜ್, ಸೇರಿದಂತೆ ನವಜೀವನ ಸಮಿತಿ ಸದಸ್ಯರು, ವಿಪ್ಪತ್ತು ನಿರ್ವಹಣಾ ಘಟಕದ ಸದಸ್ಯರು, ಮೇಲ್ವಿಚಾರಕ ವರ್ಗದ ಸಿಬ್ಬಂದಿಗಳು, ಒಕ್ಕೂಟದ ಅಧ್ಯಕ್ಷರು/ ಪದಾಧಿಕಾರಿಗಳು, ಪ್ರಗತಿ ಬಂಧು/ ಸ್ವ ಸಹಾಯ ಸಂಘದ ಸದಸ್ಯರು, ಸೇವಪ್ರತಿನಿಧಿಯವರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g