September 19, 2024

MALNAD TV

HEART OF COFFEE CITY

ಒತ್ತುವರಿ ತೆರವು ಖಂಡಿಸಿ ಕಳಸ ಬಂದ್ : ಪಟ್ಟಣದಲ್ಲಿ ಎಲ್ಲಾ ಬಂದ್ ಬಂದ್ ಬಂದ್

1 min read

 

 

ಮಲೆನಾಡಿನಲ್ಲಿ ಒತ್ತುವರಿ ಖಂಡಿಸಿ ಕರೆ ನೀಡಿದ್ದ ಕಳಸ ತಾಲೂಕು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ. ಪ್ರಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು ಜೊತೆಗೆ ಹತ್ತಾರು ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಪಟ್ಟಣದಲ್ಲಿನ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಕಳಸ ಸ್ತಬ್ಧವಾಗಿದೆ. 

 

ರಾಜ್ಯ ಸರ್ಕಾರದ ಒತ್ತುವರಿ ತೆರವು ಪ್ರಕ್ರಿಯೆ ಖಂಡಿಸಿ ಕಳಸ ತಾಲೂಕು ಬಂದ್ ಗೊಳಿಸಲಾಗಿದೆ. ಇಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದ್ದು, ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ನೀಡಿದ್ದಾರೆ. 

ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದು ಕನ್ನಡಪರ ದಲಿತ ಸಂಘಟನೆಗಳು ಸೇರಿ ಬಹುತೇಕ ಸಂಘಟನೆಗಳ ಬೆಂಬಲ ದೊರೆತಿದೆ. 

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ರಾಜ್ಯ ಸರ್ಕಾರದ ವಿರುದ್ಧ ಕಾಫಿ ಬೆಳಗಾರರ ಕೂಡಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ಒತ್ತುವರಿ ತೆರವು ನಿಲ್ಲಿಸಬೇಕೆಂದು ಒಕ್ಕೊರಲ ಆಗ್ರಹ ಕೇಳಿ ಬಂದಿದೆ. ಬೆಳಿಗ್ಗೆ 10 ಗಂಟೆಯಿಂದ ಕಳಸ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಪ್ರಮುಖ ಬೀದಿಯಲ್ಲಿ ಸಾಗಿತ್ತು. ಬಂದ್ ಹಿನ್ನೆಲೆ ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಸಹಾ ಕಲ್ಪಿಸಲಾಗಿತ್ತು.

ಸಾವಿರಾರು ಜನರಿಂದ ಕಳಸ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಯುವ ವೇಳೆಯಲ್ಲಿ ಪ್ರತಿಭಟನೆ ಸಾಗುತ್ತಿದ್ದಾಗ ಹೈಕೋರ್ಟ್ ನ್ಯಾಯಾಧೀಶರೊಬ್ಬರ ವಾಹನ ಇದೇ ಮಾರ್ಗದಲ್ಲಿ ಸಾಗುತ್ತಿತ್ತು ನಮ್ಮ ನೋವು ನ್ಯಾಯಮೂರ್ತಿಗಳಿಗೂ

ಗೊತ್ತಾಗಲಿ ಎಂದು ಪ್ರತಿಭಟನಾ ಕಾರರು ಘೋಷಣೆ ಕೂಗಿದ ಘಟನೆ ಸಹಾ ನಡೆದಿದೆ. ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭೇಟಿ ನೀಡಿಲು ಹೈಕೋರ್ಟ್ ಜಸ್ಟೀಸ್ ತೆರಳುತ್ತಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!