ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ ಮನಸ್ಸು ಕಲುಕುವ ಘಟನೆ ನಡೆದಿದೆ. ಮದುವೆ ವಿಚಾರವಾಗಿ ಉಂಟಾದ ಜಗಳದಲ್ಲಿ ಪುತ್ರನೇ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಗಂಗಮ್ಮ (65) ಎಂದು ಗುರುತಿಸಲಾಗಿದೆ. ಆರೋಪಿ ಪುತ್ರ ಉಮಾಶಂಕರ (40) ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಉಮಾಶಂಕರ ಕಳೆದ ಎರಡು ವರ್ಷಗಳ ಹಿಂದೆ ಸಂಭವಿಸಿದ ಅಪಘಾತದ ನಂತರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನು. ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಸ್ಸಾಗುವಾಗ ಮತ್ತೊಂದು ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದಿದ್ದು, ಆ ಬಳಿಕ ಅವನು ಕೆಲವೊಮ್ಮೆ ಅಸಹಜವಾಗಿ ವರ್ತಿಸುತ್ತಿದ್ದನೆಂದು ಹೇಳಲಾಗಿದೆ.
ಇದೇ ಹಿನ್ನೆಲೆದಲ್ಲಿ, ಅವನು ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಗಂಗಮ್ಮ ಜೊತೆ ಜಗಳವಾಡುತ್ತಿದ್ದನು. ಮಾರ್ಚ್ 26ರಂದು ಕೂಡ ಮದುವೆ ವಿಚಾರವಾಗಿ ಮನೆದಲ್ಲಿ ತಾಯಿ-ಮಗನ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಕೋಪೋದ್ರಿಕ್ತನಾದ ಉಮಾಶಂಕರ, ತಾಯಿ ಗಂಗಮ್ಮ ಅವರ ತಲೆಗೆ ಮೊದಲು ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಹೊಡೆತ ತಾಳಲಾರದೆ ಗಂಗಮ್ಮ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ.
ಇದರಿಂದ ಕೂಡ ತೃಪ್ತಿಯಾಗದ ಆರೋಪಿ, ಬಳಿಕ ಕಲ್ಲು ಎತ್ತಿ ತಾಯಿಯ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಗಂಗಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
















Leave a Reply