ಪಕ್ಷದ ಆದೇಶದಂತೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ; ವರಸಿದ್ಧಿ ವೇಣುಗೋಪಾಲ್
1 min readಚಿಕ್ಕಮಗಳೂರು : ಪಕ್ಷದ ಆದೇಶದಂತೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು. ಈ ಹಿಂದೆಯೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ, ರಾಜಿನಾಮೆ ಅಂಗಿಕಾರಗೊಳ್ಳುವ ಮುನ್ನವೆ ತಮ್ಮ ರಾಜಿನಾಮೆಯನ್ನು ಹಿಂಪಡೆದಿದ್ದರು. ಇದೀಗಾ ಮತ್ತೊಮ್ಮೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ, ರಾಜಿನಾಮೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದು ಈ ಬಗ್ಗೆ ಮಾತನಾಡಿದ ಅವರು ನಗರ ಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ನಾನು ಪಕ್ಷದ ಆದೇಶವನ್ನು ನಾನು ಪಾಲಿಸಿದ್ದೇನೆ ಅಷ್ಟೇ ಎಂದು ಹೇಳಿದರಲ್ಲದೆ ನಗರಸಭೆ ಕಾರ್ಯಾಲಯದ ವತಿಯಿಂದ ನಾಳೆ ಬೀದಿ ಬದಿ ವ್ಯಾಪಾರಿಗಳಿಗೆ ಅರೋಗ್ಯ ತಪಾಸಣಾ ಶಿಬಿರವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಎಲ್ಲರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g