October 18, 2024

MALNAD TV

HEART OF COFFEE CITY

ಆಗಸ್ಟ್ ನಲ್ಲಿ ಜುಲೈ ತಿಂಗಳ ಕರೆಂಟ್ ಬಿಲ್ ಬಂದಾಗ ಉಚಿತ : ಇಂಧನ ಸಚಿವ ಕೆ.ಜೆ. ಜಾರ್ಜ್

1 min read

 

 

ಯಾರೂ ಕೂಡ ಶಾಸಕ ಬಿ.ಆರ್.ಪಾಟೀಲ್ ಅವರ ರಾಜೀನಾಮೆ ಕೇಳಿಲ್ಲ. ಪಾಟೀಲ್ ವಿಚಾರದಲ್ಲಿ ಎಲ್ಲರೂ ಒಳ್ಳೆಯದ್ದನ್ನೇ ಮಾತನಾಡಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಉಮನ್ ಚಾಂಡಿಯವರ ನಿಧನ ಹೊಂದಿದ್ದರಿಂದ ಸಭೆ ಮುಂದೆ ಹೋಗಿದೆ ಅಷ್ಟೆ. ರಾಹುಲ್ ಗಾಂಧಿ ಬರದ ಕಾರಣ ಸಭೆ ತಾತ್ಕಾಲಿಕವಾಗಿ ಪೋಸ್ಟ್‍ಪೋನ್ ಆಗಿದೆ. ಯಾರ ಮೇಲೂ ಯಾರಿಗೆ ಅಸಮಾಧಾನ, ಏನೂ ಇಲ್ಲ. ಯಾರು ಕೂಡ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ಕೇಳಿಲ್ಲ ಎಂದರು. ಕೆಲ ಸಚಿವರಿಗೆ ಬೇಜಾರು ಇರಬಹುದು. ಆಗುತ್ತೆ. ಯಾಕಂದ್ರೆ, ಅಭಿವೃದ್ಧಿ ಕಾರ್ಯವನ್ನ ತಾತ್ಕಾಲಿಕವಾಗಿ ತಡೆಹಿಡಿದಿದ್ದೇವೆ. ಆದರೆ, ಅದನ್ನ ಪುನಃ ಪ್ರಾರಂಭ ಮಾಡಲು ಆದೇಶ ನೀಡಲು ಮುಂದಾಗಿದ್ದಾರೆ. ಬಜೆಟ್‍ನಲ್ಲಿ ಇರುವ ಎಲ್ಲಾ ಅಭಿವೃದ್ಧಿ ಕಾರ್ಯಗಳು ಆಗುತ್ತೆ. ಆದರೆ, ಹೊಸ ಕಾರ್ಯಕ್ರಮಕಷ್ಟೆ ನಿರ್ಬಂಧ ಎಂದರು. ರಾಜ್ಯದಲ್ಲಿ ಈಗಾಗಲೇ ಗೃಹಜ್ಯೋತಿ ಆರಂಭವಾಗಿದೆ. ಆಗಸ್ಟ್ ತಿಂಗಳಲ್ಲಿ ಬರುವ ಜುಲೈ ತಿಂಗಳ ಬಿಲ್ ಬಂದಾಗ ಎಲ್ಲರಿಗೂ ಫ್ರೀ ಸಿಗಲಿದೆ ಎಂದರು. ಇದೇ ವೇಳೆ, ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವ ಕಸ್ತೂರಿ ರಂಗನ್ ವರದಿಯ ಆತಂಕದ ಬಗ್ಗೆ ಪ್ರತಿಕ್ರಿಯೆ ನೀಡಿದ ಜಾರ್ಜ್, ರಾಜ್ಯದಲ್ಲಿ ಹಲವು ಸರ್ಕಾರಗಳು ಆಡಳಿತ ನಡೆಎಂದಿದ್ದಾರೆೆ. ಆದರೆ, ಯಾವ ಮಂತ್ರಿ ಮಂಡಲದಲ್ಲೂ ಸೆನ್ಸಿಟೀವ್ ಜ್ಹೋನ್ ಬಗ್ಗೆ ತೀರ್ಮಾನ ಆಗಿರಲಿಲ್ಲ. ಪ್ರತಿ ಸರ್ಕಾರದ ಅವಧಿಯಲ್ಲೂ ಮುಂದೆ ಹೋಗುತ್ತಿತ್ತು. ಆದರೆ, ಈಗ ಸೆನ್ಸಿಟೀವ್ ಜ್ಹೋನ್ ಮಾಡಲು ಕ್ಯಾಬಿನೆಟ್ ಉಪಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ. ಆ ಸಬ್ ಕಮಿಟಿ ಚರ್ಚೆಯ ಬಳಿಕ ಕ್ಯಾಬಿನೇಟ್‍ನಲ್ಲಿ ತೀರ್ಮಾನವಾಗಲಿದೆ. ಎಕೋ ಸೆನ್ಸಿಟೀವ್ ಜ್ಹೋನ್ ಅನ್ನ ಎಷ್ಟು ಕಿ.ಮೀ. ಮಾಡಬೇಕು ಎಂದು ತೀರ್ಮಾನವಾಗಿರಲಿಲ್ಲ. ಹಾಗಾಗಿ, ಸಬ್ ಕಮಿಟಿಯಲ್ಲಿ ಚರ್ಚೆ ಮಾಡುತ್ತಾರೆ. ಸಬ್ ಕಮಿಟಿಯ ವರದಿ ಬಂದ ಬಳಿಕ ಯಾರಿಗೂ ತೊಂದರೆಯಾಗದಂತೆ ಕ್ಯಾಬಿನೆಟ್‍ನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!