ಸರ್ಕಾರಿ ಶಾಲೆಯ ಕಾಂಪೌಂಡ್ ನಲ್ಲಿ ಅಡಗಿ ಕುಳಿತಿದ್ದ ಕಾಳಿಂಗ ಸರ್ಪ : ಗ್ರಾಮಸ್ಥರು ಗಾಬರಿ
1 min read
15 ಕ್ಕೂ ಹೆಚ್ಚು ಕಾಡು ಕೋಣಗಳು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿವೆ. ಕಾಡುಕೋಣಗಳ ಗುಂಪು ಕಾಫಿ ತೋಟಕ್ಕೆ ಲಗ್ಗೆ ಇಟ್ಟು ಕಾಫಿ ಗಿಡಗಳನ್ನು ಹಾನಿ ಮಾಡ್ತಾ ಇರೋ ದೃಶ್ಯ ಕಂಡು ಬಂದಿದ್ದು, ಚಿಕ್ಕಮಗಳೂರು ತಾಲೂಕಿನ
ಮಲ್ಲಂದೂರು ಗ್ರಾಮದ ಕಾಫಿ ತೋಟಗಳಲ್ಲಿ, ಈ ಭಾಗ ಸುತ್ತಮುತ್ತ ಕಳೆದ ಒಂದು ತಿಂಗಳಿನಿಂದ ಓಡಾಡ್ತಿರೋ ಕಾಡುಕೋಣಗಳು ಜನರಿಗೆ ಭಯ ಉಂಟು ಮಾಡಿವೆ.
ಕಾಡು ಕೋಣಗಳನ್ನು ಸ್ಥಳಾಂತರ ಮಾಡುವಂತೆ ಸ್ಥಳೀಯರು ಆಗ್ರಹ ಪಡಿಸಿದ್ದಾರೆ. ಅಲ್ಲದೇ ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತ ಬೃಹತ್ ಗಾತ್ರದ ಕಾಳಿಂಗ ಸರ್ಪ
ಕಂಡು ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆಯ ಕಾಪೌಂಡ್ ಸಮೀಪದ ಪೊದೆಯಲ್ಲಿ ಅವಿತ್ತಿದ್ದ ಹಾವು ಗಾಬರಿ ಹುಟ್ಟಿಸಿದೆ. ಸುಂಕ ಸಾಲೆ ಗ್ರಾಮದ ಸರ್ಕಾರಿ ಶಾಲೆ ಹಾವುಗಳಿಗೆ ಆಶ್ರಯ ತಾಣವಾಗುತ್ತಿದೆ. ಕಾಳಿಂಗ ಸರ್ಪವಿದ್ಜ ಸ್ಥಳವನ್ನು ಸ್ಥಳೀಯರು ಪತ್ತೆ ಹಚ್ಚಿದರು. ಬರೋಬ್ಬರಿ 14 ಅಡಿ ಉದ್ದದ ಕಾಳಿಂಗವನ್ನು ಉರಗ ರಕ್ಷಕ ರಿಜ್ವಾನ್ ಹಿಡಿದಿದ್ದಾರೆ.
ಹಾವನ್ನು ಸೆರೆ ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಟ್ಟ ರಿಜ್ವಾನ್ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g