September 19, 2024

MALNAD TV

HEART OF COFFEE CITY

ಕೆಎಸ್.ಆರ್.ಟಿ.ಸಿ ಡಿ.ಸಿ ಗೆ ಮನಸ್ಸೋ ಇಚ್ಚೆ ಚಾಕು ಚುಚ್ಚಿ ನೌಕರ ಪರಾರಿ

1 min read

 

ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಕೆಎಸ್ಆರ್. ಟಿ.ಸಿ ಡಿ.ಸಿಗೆ ಚಾಕು ಇರಿದ ಘಟನೆ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ವಾಹನ ಹತ್ತುವ ವೇಳೆ ಅಡ್ಡಗಟ್ಟಿದ ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಚುಚ್ಚಲು ಮುಂದಾಗಿದ್ದಾನೆ. ಈ ವೇಳೆ ಪ್ರತಿರೋಧ ಒಡ್ಡಿದ ಡಿ.ಸಿ ಜಗದೀಶ್ ಕೈಗೆ ಚಾಕು ಇರಿಯಲಾಗಿದೆ. ಗಾಯಗೊಂಡ ಅವರನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ರಿತೇಶ್ ಪರಾರಿಯಾಗಿದ್ದಾನೆ.

ಕೆ.ಎಸ್.ಆರ್.ಟಿ.ಸಿ. ಡಿಸಿಗೆ ಚಾಕು ಇರಿದು ಮನಬಂದಂತೆ ಚುಚ್ಚಿದ ಸಿಬ್ಬಂದಿ ಕೃತ್ಯಕ್ಕೆ ನಗರದ ಸರ್ಕಾರಿ ಬಸ್ ನಿಲ್ದಾಣ ಇಂದು ಸಂಜೆ ಸಾಕ್ಷಿಯಾಗಿದೆ. ಕೈ ಅಡ್ಡ ಕೊಟ್ಟಿದ್ದರಿಂದ ತಪ್ಪಿದ ಭಾರೀ ಅನಾಹುತ ಒಂದು ತಪ್ಪಿದಂತಾಗಿದೆ.
ಘಟನೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಡಿಸಿಯ ಎಡಗೈನ ಎರಡು ಬೆರಳುಗಳಿಗೆ ಗಾಯವಾಗಿದ್ದು
ಚಿಕ್ಕಮಗಳೂರು ಸರ್ಕಾರಿ ಬಾಸ್ ನಿಲ್ದಾಣದ ಒಳಗೆ ಈ ಘಟನೆ ನಡೆದಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬುವವರಿಂದ ಹಲ್ಲೆ ನಡೆದಿದ್ದು, ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬದ ಸದಸ್ಯರನ್ನ ಕರೆಸಿ ಕೌನ್ಸಿಲಿಂಗ್ ಮಾಡಿದ್ದ ಡಿಸಿ ಕ್ರಮದಿಂದ ಕುಪಿತನಾಗಿ ಕೃತ್ಯ ಎಸಗಿದ್ದಾನೆ.
ಕುಟುಂಬದವರ ಮನವಿ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆಯಾಗಿದ್ದ ರಿತೇಶ್ ತನಗೆ ಮನೆಯವರ ಎದುರು ಅವಮಾನ ಮಾಡಿದ್ದಾರೆ ಎಂದು ಇಂದು ಏಕಾಏಕಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ್ದಾನೆ. ಚಾಕುವಿನಿಂದ ಮನಬಂದಂತೆ ಹಲ್ಲೆ ಬಳಿಕ ನಾಪತ್ತೆಯಾಗಿರೋ ರಿತೇಶ್ ಓಡಿ ಹೋಗಿದ್ದಾನೆ. ಚಿಕ್ಕಮಗಳೂರು
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!