September 17, 2024

MALNAD TV

HEART OF COFFEE CITY

ಬಿರುಗಾಳಿ ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ ತೆರವುಗೊಳಿಸಿದ ಸ್ಥಳೀಯರು

1 min read

 

 

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಅನಾಹುತಗಳು ಮತ್ತಷ್ಟು ಹೆಚ್ಚುತ್ತಿವೆ ಗಾಳಿ ಮಳೆಗೆ ರಸ್ತೆಗೆ ಮರ ಬಿದ್ದು ಟ್ರಾಫಿಕ್ ಜಾಮ್ ಉಂಟಾಗಿ ಸ್ಥಳೀಯರೇ ಮರ ತೆರವುಗೊಳಿಸಿದ ಘಟನೆ ನಡೆದಿದೆ.‌ 

 

ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿಗೆ ಬೃಹತ್ ಮರ ರಸ್ತೆಗುರುಳಿದೆ. ಮಾಗುಂಡಿ ಬಾಳೆಹೊನ್ನೂರು ಮಾರ್ಗ ಬಂದ್ ಆಗಿತ್ತು, ಎನ್.ಆರ್.ಪುರ ತಾಲೂಕ್ ನಿಂದ ಕಳಸ ತಾಲೂಕಿಗೆ ಸಂಪರ್ಕ ಕಲ್ಪಿಸುವ ಮಾಗುಂಡಿ ಬಳಿ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆಯೇ ಬಾಳೆಹೊನ್ನೂರು-ಕಳಸ ರಸ್ತೆ ಬಂದ್ ಆಗಿ ಕಳಸ-ಹೊರನಾಡಿಗೆ ಹೋಗಿ ಬರುವ ಮಾರ್ಗವೂ ಸ್ಥಗಿತವಾಗಿತ್ತು,

ಸುಮಾರು ಅರ್ಧ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ಕೂಡಲೇ ಕಾರ್ಯಪ್ರವೃತರಾಗಿ ಸ್ಥಳಿಯರು ಮರ ತೆರವುಗೊಳಿಸಿದರು. ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಸ್ಥಳೀಯರೇ ಅನುವು ಮಾಡಿಕೊಟ್ಟರು. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹಲವೆಡೆ ಮಳೆ ನಿರಂತರವಾಗಿ ಸುರಿಯುತ್ತಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!