मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಬೆಂಬಲ ಬೆಲೆಗೆ ಆಗ್ರಹಿಸಿ ತಂಬಾಕು ಬೆಳೆಗಾರರ ಬೃಹತ್ ಪ್ರತಿಭಟನೆ – ನಡುರಸ್ತೆಯಲ್ಲಿ ತಂಬಾಕಿಗೆ ಬೆಂಕಿ

---Advertisement---

 

 

ಹಾಸನ: ತಾವು ಕಷ್ಟಪಟ್ಟು ಬೆಳೆದ ತಂಬಾಕು ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡದ ಅಧಿಕಾರಿಗಳ ಹಾಗೂ ಸರ್ಕಾರದ ಕ್ರಮವನ್ನು ಖಂಡಿಸಿ ನೂರಾರು ತಂಬಾಕು ಬೆಳೆಗಾರರು ನಡುರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.

ಬೆಂಬಲ ಬೆಲೆ ಸಿಗದೆ ಕಂಗೆಟ್ಟಿರುವ ನೂರಾರು ರೈತರು ಏಕಾಏಕಿ ರಸ್ತೆಗಿಳಿದು ಹೋರಾಟದ ಹಾದಿ ಹಿಡಿದಿದ್ದಾರೆ. ನಡುರಸ್ತೆಯಲ್ಲಿಯೇ ತಂಬಾಕು ಬ್ಯಾರೆಲ್‌ಗಳನ್ನು ತಂದಿಟ್ಟು, ಅವುಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ತೀವ್ರ ಆಕ್ರೋಶವನ್ನು ಹೊರಹಾಕಿದರು. ರಸ್ತೆಯ ಮಧ್ಯೆ ತಂಬಾಕು ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸೂಕ್ತ ಬೆಲೆ ಕಲ್ಪಿಸುವಲ್ಲಿ ವಿಫಲರಾಗಿರುವ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನಾ ನಿರತ ರೈತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ನಾವು ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗುತ್ತಿಲ್ಲ, ಅಧಿಕಾರಿಗಳು ನಮ್ಮ ನೆರವಿಗೆ ಬರುತ್ತಿಲ್ಲ” ಎಂದು ರೈತರು ಕಿಡಿಕಾರಿದರು.

 

 

ಕಳೆದ ಕೆಲವು ಸಮಯದಿಂದ ಮಾರುಕಟ್ಟೆಯಲ್ಲಿ ತಂಬಾಕಿಗೆ ನಿರೀಕ್ಷಿತ ಬೆಲೆ ಸಿಗದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಹಾಗೂ ತಂಬಾಕು ಮಂಡಳಿ  ಕೂಡಲೇ ಮಧ್ಯಪ್ರವೇಶಿಸಿ, ತಂಬಾಕಿಗೆ ವೈಜ್ಞಾನಿಕ ಹಾಗೂ ಯೋಗ್ಯ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

 

 

Join WhatsApp

Join Now

Join Telegram

Join Now

और पढ़ें

ಕಸ್ತೂರಿ ರಂಗನ್ ವರದಿ ಜಾರಿಗೆ ಆಕ್ರೋಶ: ಬಾಳೆಹೊನ್ನೂರು ಸಂಪೂರ್ಣ ಸ್ತಬ್ಧ, ರಸ್ತೆಗಿಳಿದು ಮಲೆನಾಡಿಗರ ಪ್ರತಿಭಟನೆ

ನೀರಿಗಾಗಿ ಭದ್ರಾ ನಾಲೆ ಮೇಲೆ ಕೂತು ರೈತರ ಹೋರಾಟ ಮೊದಲು ನಮಗೆ ನೀರು ಬಿಡಿ, ಆಮೇಲೆ ಚಿತ್ರದುರ್ಗಕ್ಕೆ ನೀರು ಬಿಡಿ ಎಂದು ಆಗ್ರಹ

ತುಂಗಾ ನದಿಯಲ್ಲಿ ಬಿದ್ದು ಯುವಕ ಸಾವು ಪೋಟೋ ತೆಗೆಯಲು ಹೋಗಿ ನದಿಗೆ ಬಿದ್ದಿರುವ ಶಂಕೆ

ಎತ್ತಿನಭುಜ ಚಾರಣಕ್ಕೆ ಬಂದ ಪ್ರವಾಸಿಗರ ಪರದಾಟ: ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಚಿಕ್ಕಮಗಳೂರಿನಲ್ಲಿ 40ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೀದಿಗಿಳಿದು ಜೆಡಿಎಸ್ ಹೋರಾಟ – ಸ್ಥಳೀಯ ಶಾಸಕರ ವಿರುದ್ಧ ಸುಧಾಕರ್ ಶೆಟ್ಟಿ ವಾಗ್ದಾಳಿ 

Leave a Comment