September 17, 2024

MALNAD TV

HEART OF COFFEE CITY

ಮೂಡಿಗೆರೆಗೆ ನಯನಾ ಬೇಡ, ಹೊಸಬರು ಬೇಕು, ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗ ಸಭೆ

1 min read

ವಿಧಾನಸಭೆ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗದರಿದ್ದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ಬೇಡವೇ ಬೇಡ ಎಂದು ಕಾರ್ಯಕರ್ತರು ಬಹಿರಂಗ ಸಭೆ ನಡೆಸಿದ್ದಾರೆ. ನಿನ್ನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಯನಾಗೆ ಟಿಕೆಟ್ ನೀಡಿದಂತೆ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕರಿಗೂ ಮನವಿ ಮಾಡಲು ನಿರ್ಧರಿಸಿದ್ದಾರೆ. ನಯನಾಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲು ಖಚಿತ. ಕ್ಷೇತ್ರದ ಜನ ನಯನ ಅವರನ್ನು ಒಪ್ಪುತ್ತಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೂಡ ನಯನಾಗೆ ಟಿಕೆಟ್ ನೀಡಲು ವಿರೋಧಿಸಿದ್ದಾರೆ. ಈಗಾಗಲೇ ಮೊಟ್ಟಮ್ಮ ಕೂಡ ಹಲವು ಬಾರಿ ಸೋಲು ಕಂಡಿದ್ದಾರೆ. ಈ ಮಧ್ಯೆ ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.

ಈಗ ಅವರ ಮಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುವುದು ಗ್ಯಾರಂಟಿ. ಹಾಗಾಗಿ ಸ್ಥಳೀಯರು ಹಾಗೂ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿ ನಯನ ವಿರುದ್ಧ ಬಹಿರಂಗ ಸಭೆ ನಡೆಸುತ್ತಿದ್ದಾರೆ. ಕಳೆದೊಂದು ವಾರದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆಯಲ್ಲೂ ಸಭೆ ಸೇರಿ ಅಸಮಾಧಾನ ಹೊರಹಾಕಿದ್ದರು. ಮುಂದಿನ ವಾರದಲ್ಲಿ ಗೋಣಿಬೀಡು ಹೋಬಳಿಯಲ್ಲೂ ಸಭೆ ಸೇರುವುದಾಗಿ ತೀರ್ಮಾನಿಸಿದ್ದಾರೆ. ನಯನ ವಿರುದ್ಧ ಕಾಂಗ್ರೆಸ್ ಹೋಬಳಿಗಳಿಗೆ ಹೋಗಿ ಸಭೆ ನಡೆಸಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಹೊಸ ಮುಖಕ್ಕೆ ಮಣೆ ಹಾಕುವಂತೆ ರಾಜ್ಯ ನಾಯಕರಿಗೆ ಆಗ್ರಹಿಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!